ಉಡುಪಿ, ಆ. 23 (DaijiworldNews/SM): ದ.ಕ., ಉಡುಪಿ, ಕೊಡಗು ಜಿಲ್ಲೆಗಳಲ್ಲಿ ಶಾಲೆ ಆರಂಭಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಪ್ರತಿಕ್ರಿಯೆ ನೀಡಿದ್ದಾರೆ. ಶಾಲೆ ಆರಂಭಕ್ಕೆ ನಾವು ಕೂಡ ಉತ್ಸುಕರಾಗಿದ್ದೇವೆ ಎಂದಿದ್ದಾರೆ.
ಉಡುಪಿಯಲ್ಲಿ ಮಾತನಾಡಿರುವ ಅವರು, ಈ ಮೂರು ಜಿಲ್ಲೆಗಳಲ್ಲಿ ಸೋಂಕಿನ ಪ್ರಮಾಣ ಶೇ. 2ಕ್ಕಿಂತ ಕಡಿಮೆಗೊಳಿಸುವ ಗುರಿ ಹೊಂದಲಾಗಿದೆ. ಶಾಲೆ ಆರಂಭಕ್ಕೆ ನಾವು ಕೂಡ ಉತ್ಸುಕರಾಗಿದ್ದೇವೆ. ಆದರೆ, ಸೋಂಕು ನಿಯಂತ್ರಣಕ್ಕೆ ತರುವುದು ನಮ್ಮ ಮೊದಲ ಆದ್ಯತೆ ಎಂದಿದ್ದಾರೆ.
ಇನ್ನೊಂದೆಡೆ ಇದು ಜಿಲ್ಲೆಗಳಿಗೆ ಎಚ್ಚರಿಕೆ ಕೂಡ ಆಗಿದೆ ಎಂದು ಅವರು ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.