ಮಂಗಳೂರು ಆ 24 (DaijiworldNews/MS): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವುದರಿಂದ, ಷರತ್ತಿಗೆ ಒಳಪಟ್ತು ಆ.30 ರಿಂದ ಹಂತಹಂತವಾಗಿ ಪದವಿ ಪೂರ್ವ ತರಗತಿಗಳನ್ನು ಪ್ರಾರಂಭಿಸಲು ಹಾಗೂ ಮುಂದಿನ 2 ವಾರಗಳ ಕಾಲ ಪ್ರೌಢ ಶಾಲೆಗಳ ಭೌತಿಕ ತರಗತಿ ಆರಂಭಿಸದೆ ಇರಲು ಜಿಲ್ಲಾಡಳಿತ ನಿರ್ಧರಿಸಿದೆ.
ಶಾಲಾರಂಭದ ಬಗ್ಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಸಚಿವ ಎಸ್. ಅಂಗಾರ ಅಧ್ಯಕ್ಷತೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣೆ ಹಾಗೂ ಕೊವೀಡ್ ನಿಯಂತ್ರಣ ಕುರಿತು ಹಮ್ಮಿಕೊಳ್ಳಲಾಗಿದ್ದ ಸಭೆ ಯಲ್ಲಿ ನಿರ್ಧರಿಸಲಾಗಿದೆ. ಸಭೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲು, ದ.ಕ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಹಾಗೂ ಜಿಲ್ಲೆಯ ಶಾಸಕರು ಭಾಗವಹಿಸಿದ್ದರು.
ಸಭೆಯಲ್ಲಿ ಪಾಸಿಟಿವಿಟಿ ರೇಟ್ ಶೇ.2ಕ್ಕಿಂತ ಕೆಳಗೆ ಇಳಿಯುವ ತನಕ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸಭೆನಿರ್ಣಯಿಸಿತು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ, ಪಿಯು ವಿದ್ಯಾರ್ಥಿಗಳು ಕಡ್ಡಾಯವಾಗಿ ಆರ್ ಪಿಟಿಸಿ ಅರ್ ವರದಿಯನ್ನು ತರಬೇಕು. ಸೋಂಕಿತರು ಕಡ್ಡಾಯವಾಗಿ ಕ್ವಾರಂಟೈನ್ ನಲ್ಲಿರಬೇಕು, ಕ್ವಾರಂಟೈನ್ ನಿಂದ ಹೊರಬಂದ ಬಳಿಕ ಬಳಿಕ ಮತ್ತೊಮ್ಮೆ ಆರ್ ಪಿಟಿ ಸಿ ಅರ್ ತಪಾಸಣೆ ಮಾಡಿಸಕೊಳ್ಳಬೇಕು ಇತಾದಿ ಷರತ್ತಿಗೊಳಪಟ್ಟು ಕಾಲೇಜು ಆರಂಭಕ್ಕೆ ಅನುಮತಿಸಲಾಗುವುದು ಎಂದು ತಿಳಿಸಿದ್ದಾರೆ.
ಪಿಯು ತರಗತಿಗಳು ಆರಂಭಗೊಂಡ ಬಳಿಕ ಪರಿಸ್ಥಿತಿಯನ್ನು ನೋಡಿಕೊಂಡು ಶಾಲೆಗಳನ್ನು ತೆರೆಯುವ ಬಗ್ಗೆ ನಿರ್ಧರಿಸಲಾಗುವುದು.ಕೋವಿಡ್ ನಿಯಮ ಪಾಲನೆಗೆ ವಿಶೇಷ ಆದ್ಯತೆ ನೀಡಲಾಗುವುದು ಎಂದು ಹೇಳಿದ್ದಾರೆ.