ಕಾಸರಗೋಡು, ಆ. 24(DaijiworldNews/HR): ಜಿಲ್ಲಾ ಕನ್ನಡ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಪತ್ರಕರ್ತರ ಸಮ್ಮಿಲನ ಹಾಗೂ ಹಿರಿಯ ಪತ್ರಕರ್ತರಿಗೆ ಗೌರವಾರ್ಪಣೆ ಸಮಾರಂಭ ತಾಲಿಪಡ್ಪು ಹೊಟೇಲ್ ಉಡುಪಿ ಗಾರ್ಡನ್ ನಲ್ಲಿ ನಡೆಯಿತು.
ಸಮಾರಂಭವನ್ನು ಕರ್ನಾಟಕ ವಿಧಾನಪರಿಷತ್ನ ಮಾಜಿ ಮುಖ್ಯ ಸಚೇತಕ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಉದ್ಘಾಟಿಸಿದ್ದು, ಜಿಲ್ಲಾ ಕನ್ನಡ ಪತ್ರಕರ್ತರ ಸಂಘದ ಅಧ್ಯಕ್ಷ ಎ.ಆರ್ ಸುಬ್ಬಯ್ಕಟ್ಟೆ ಅಧ್ಯಕ್ಷತೆ ವಹಿಸಿದ್ದರು.
ಶಾಸಕ ಎನ್.ಎ ನೆಲ್ಲಿಕುನ್ನು, ಕನ್ನಡ ಸಾಹಿತ್ಯ ಪರಿಷತ್ನ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಕರ್ನಾಟಕ ರಾಜ್ಯ ಕೊಂಕಣಿ ಸಾಹಿತ್ಯ ಅಕಾಡಮಿಯ ಮಾಜಿ ಅಧ್ಯಕ್ಷ ಕಾಸರಗೋಡು ಚಿನ್ನಾ, ಉದ್ಯಮಿ ರಾಮ್ ಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.
ಈ ಸಂದರ್ಭ ಹಿರಿಯ ಪತ್ರಕರ್ತರಾದ ಪ್ರದೀಪ್ ಕುಮಾರ್ ಬೇಕಲ್, ಅಚ್ಯುತ ಚೇವಾರ್ ರವರನ್ನು ಗೌರವಿಸಲಾಯಿತು.
ಪ್ರಧಾನ ಕಾರ್ಯದರ್ಶಿ ಗಂಗಾಧರ ತೆಕ್ಕೆಮೂಲೆ ಸ್ವಾಗತಿಸಿ, ಕೋಶಾಧಿಕಾರಿ ಪುರುಷೋತ್ತಮ ಪೆರ್ಲ ವಂದಿಸಿದರು. ವಿಜಿ ಕಾಸರಗೋಡು ಸನ್ಮಾನಿತರ ಪರಿಚಯ ಮಾಡಿದರು . ರವಿ ನಾಯ್ಕಾಪು ಕಾರ್ಯಕ್ರಮ ನಿರೂಪಿಸಿದರು.