ಮಂಗಳೂರು, ಆ 25 (DaijiworldNews/MS): ನಗರದ ಕೊಡಿಯಾಲ್ ಬೈಲ್ ಯೆನಪೊಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಕಾಂಗ್ರೆಸಿಗ ರಾಜ್ಯಸಭಾ ಸದಸ್ಯ , ಕೇಂದ್ರದ ಮಾಜಿ ಸಚಿವ ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿದೆ ಎಂದು ಅವರ ಅಪ್ತ ವಲಯದ ಮೂಲಗಳು ತಿಳಿಸಿವೆ.
ಈಗ ಅವರನ್ನು ವೆಂಟಿಲೇಟರ್ ಬೆಂಬಲದಿಂದ ಹೊರಗೆ ತಂದಿದ್ದು, ಪರಿಣತ ವೈದ್ಯರ ತಂಡದಿಂದ ತೀವ್ರ ನಿಗಾ ಘಟಾದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕಳೆದ ತಿಂಗಳು ಆಸ್ಕರ್ ಫೆರ್ನಾಂಡಿಸ್ ಅವರು ಬೆಳಗ್ಗೆ ಸರಳ ಯೋಗ ಮಾಡುತ್ತಿದ್ದ ವೇಳೆ ಆಯತಪ್ಪಿ ನೆಲಕ್ಕೆ ಬಿದ್ದು ತಲೆಗೆ ಪೆಟ್ಟಾಗಿತ್ತು. ಯಾವುದೇ ನೋವು-ಗಾಯ ಕಂಡುಬಂದಿರಲಿಲ್ಲ. ಅದೇ ದಿನ ಸಂಜೆ ಡಯಾಲಿಸಿಸ್ಗೆಂದು ಮಂಗಳೂರು ನಗರದ ಯೇನೆಪೋಯ ಆಸ್ಪತ್ರೆಗೆ ಹೋಗಿದ್ದು, ವೈದ್ಯರು ಪರೀಕ್ಷೆ ನಡೆಸಿದಾಗ ತಲೆಯಲ್ಲಿ ರಕ್ತ ಹೆಪ್ಪುಗಟ್ಟಿರುವುದು ಗೊತ್ತಾಗಿದೆ. ಆಗಲೂ ಆಸ್ಕರ್ ಸಹಜವಾಗಿಯೇ ಇದ್ದರು. ಆದರೂ ಕೂಡಲೇ ಅವರನ್ನು ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ಸೇರಿಸಿ ಚಿಕಿತ್ಸೆ ಆರಂಭಿಸಲಾಗಿತ್ತು. ಮರುದಿನ ಪ್ರಜ್ಞೆ ಕಳೆದುಕೊಂಡಿದ್ದರು. ಆದಾದ ಬಳಿಕ ಅವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು.