ಕಾರ್ಕಳ, ಆ 25 (DaijiworldNews/PY): ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನೂತನವಾಗಿ ನಿರ್ಮಿಸಿದ ಅಟಲ್ ಟಿಂಕರಿಂಗ್ ಲ್ಯಾಬ್ ಅನ್ನು ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನೀಲ್ ಕುಮಾರ್ ಉದ್ಘಾಟಿಸಿದರು.
ಈ ವೇಳೆ ಪ್ರಿಯಾಂಕ ಸುನೀಲ್ಕುಮಾರ್, ಉದ್ಯಮಿ ಪ್ರಭಾಕರ್ ಕಾಮತ್, ಜಿಲ್ಲಾ ಪಂಚಾಯತ್ನ ನಿಕಟಪೂರ್ವ ಸದಸ್ಯ ಸುಮಿತ್ ಶೆಟ್ಟಿ, ಎಪಿಜಿಇಟಿ ಅಧ್ಯಕ್ಷ ಡಾ.ಸುಧಾಕರ್ ಶೆಟ್ಟಿ, ಟ್ರಸ್ಟಿಗಳಾದ ಕರುಣಾಕರ್ ಶೆಟ್ಟಿ, ವಿದ್ಯಾವತಿ. ಎಸ್. ಶೆಟ್ಟಿ, ಪಿಯು ಪ್ರಿನ್ಸಿಪಾಲ್ ದಿನೇಶ್.ಎಂ.ಕೊಡವೂರ್, ಹೈಸ್ಕೂಲ್ ವೈಸ್ ಪ್ರಿನ್ಸಿಪಾಲ್ ವಾಣಿ ಜಯಶೀಲ್, ಉದ್ಯಮಿ ಕಮಲಾಕ್ಷ ನಾಯಕ್ ಉಪಸ್ಥಿತರಿದ್ದರು.