ಸುಳ್ಯ, ಆ. 25 (DaijiworldNews/SM): ರಾಜ್ಯ ಸರಕಾರ ಯಾವುದೇ ಪೂರ್ವ ತಯಾರಿ ಇಲ್ಲದೆ ತರಾತುರಿಯಲ್ಲಿ ಶಾಲೆ ಕಾಲೇಜು ತರೆದಿದ್ದು ಇದರಿಂದ ಅಪಾಯ ಹೆಚ್ಚಾಗಲಿದೆ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಆರೋಪಿಸಿದ್ದಾರೆ.
ಅವರು ಸುಳ್ಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ವಿದ್ಯಾರ್ಥಿಗಳು ಸೇರಿದಂತೆ ಹೆಚ್ಚಿನವರಿಗೆ ಕೋವಿಡ್ ಲಸಿಕೆ ನೀಡಿಲ್ಲ. ಅದರೊಟ್ಟಿಗೆ ಕೇಂದ್ರ ಸರಕಾರದಿಂದ ಹೊಸ ಶಿಕ್ಷಣ ನೀತಿ ಜಾರಿಗೆ ತರಲಾಗಿದೆ. ಈ ತನಕ ಯಾವುದು ಕೂಡ ಸರಿಯಾಗಿ ಅನುಷ್ಠಾನಗೊಂಡಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಇನ್ನು ದ.ಕ. ಜಿಲ್ಲೆಯಲ್ಲಿ ಸದ್ಯ ಆರಂಭದಲ್ಲಿ ಪಿಯು ಬಳಿಕ ಪ್ರೌಢ ಶಾಲಾ ತರಗತಿಗಳನ್ನು ಆರಂಭಿಸುವುದಾಗಿ ಜಿಲ್ಲಾಡಳಿತ ಹೇಳಿದೆ. ಬಹುತೇಕ ಸೆಪ್ಟೆಂಬರ್ ಮೊದಲ ವಾರದಲ್ಲಿ ಹೈಸ್ಕೂಲ್ ವಿಭಾಗ ಆರಂಭಗೊಳ್ಳಲಿದೆ.