ಮಂಗಳೂರು, ಆ 28 (DaijiworldNews/PY): ಮಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ದೊರೆತ ಚಿನ್ನದ ಬಳೆಯನ್ನು ಅಲ್ಲಿನ ಸಿಬ್ಬಂದಿಯೋರ್ವರು ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ.
ವಿಮಾನ ನಿಲ್ದಾಣದಲ್ಲಿ ಟ್ರಾಲಿ ರಿಟ್ರಿವರ್ ಆಗಿರುವ ಡೊಂಬಯ್ಯ ಪೂಜಾರಿ ಅವರಿಗೆ ವಿಮಾನ ನಿಲ್ದಾಣದ ಪಾರ್ಕಿಂಗ್ ಸ್ಥಳದಲ್ಲಿ ಚಿನ್ನದ ಬಳೆಯೊಂದು ದೊರಕಿತ್ತು. ತಕ್ಷಣವೇ ಅವರು ಬಳೆಯನ್ನು ವಿಮಾನ ನಿಲ್ದಾಣದ ಲಾಸ್ಟ್ ಆಂಡ್ ಫೌಂಡ್ ಚೇಂಬರ್ಗೆ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ, "ಡೊಂಬಯ್ಯ ಪೂಜಾರಿ ಅವರ ಪ್ರಾಮಾಣಿಕತೆ ಹಾಗೂ ಸಮಗ್ರತೆಯನ್ನು ನಾವು ಅಭಿನಂದಿಸುತ್ತೇವೆ" ಎಂದಿದೆ.