ಕಾರ್ಕಳ, ಆ 28 (DaijiworldNews/MS): ಕಾರ್ಕಳ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯು ಮುಂದಿನ ಆರು ತಿಂಗಳ ಅವಧಿಯೊಳಗಾಗಿ ವಿದ್ಯುತ್ ಕಡಿತದಿಂದ ಮುಕ್ತವಾಗಲಿದೆ. ಅಗತ್ಯ ಇರುವ ಗ್ರಾಮಗಳಲ್ಲಿ ವಿದ್ಯುತ್ ಪರಿವರ್ತಕಗಳನ್ನು ಅಳವಡಿಸಲಾಗುವುದು. ಹೊಸತಾಗಿ ವಿಭಾಗೀಯ ಕಚೇರಿ ಆರಂಭಿಸುವ ಮೂಲಕ ಇಲಾಖೆಗೆ ಅಗತ್ಯವಿರುವ ಎಲ್ಲಾ ಸಲಕರಣೆಗಳು ಇಲ್ಲಿಂದಲೇ ದೊರಕಲಿದೆ. ಅದಕ್ಕಾಗಿ ಸಂಬಂಧ ಪಟ್ಟ ಅಧಿಕಾರಿಗಳನ್ನು, ಸಿಬ್ಬಂದಿಗಳನ್ನು ನಿಯೋಜಿಸಲಾಗುವುದೆಂದು ಇಂಧನ ಸಚಿವ ವಿ.ಸುನೀಲ್ಕುಮಾರ್ ಹೇಳಿದರು.
ನಕ್ಸಲ್ ಪೀಡಿತ ಈದು ಗ್ರಾಮ ಪಂಚಾಯತ್ ಕಚೇರಿಗೆ ಸಚಿವರಾದ ಬಳಿಕ ಮೊಟ್ಟಮೊದಲ ಭೇಟಿ ಹಾಗೂ ಜನಸ್ಪಂದನ ಕಾರ್ಯಕ್ರಮದಲ್ಲಿ ಅಹವಾಲು ಸ್ವೀಕರಿಸಿ ಮಾತನಾಡಿದರು. ಅತೀ ಕುಗ್ರಾಮವಾಗಿದ್ದ ಈದು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬಹುಕೋಟಿ ಯೋಜನೆಯ ಕಾಮಗಾರಿ ನಡೆದಿದ್ದು, ಇನ್ನು ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಕಾಮಗಾರಿಗಳು ನಡೆಯಲಿದೆ. ಪ್ರಮುಖವಾಗಿ ಹೊಸ್ಮಾರು ಪೇಟೆಯಿಂದ ಈದು ಕ್ರಾಸ್ ವರೆಗೆ ಚತುಷ್ಪರ್ಥ ರಸ್ತೆ ನಿರ್ಮಾಣವಾಗಲಿದೆ. ಅಭಿವೃದ್ಧಿಯ ನಿರೀಕ್ಷೆಗಳು ಸಕಾರಗೊಳಿಸಲಾಗುವುದು. ಸಚಿವನಾಗಿ ಕ್ಷೇತ್ರದ ಜನತೆ ಕೃತಜ್ಞತೆ ಸಲ್ಲಿಸುವ ನಿಟ್ಟಿನಲ್ಲಿ ಗ್ರಾಮಗಳಲ್ಲಿ ಭೇಟಿ ನೀಡಲು ಜನಸ್ಪಂದನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಆ ಮೂಲಕ ಮೊದಲ ದಿನ ೧೪ ಹಾಗೂ ಎರಡನೇ ದಿನ 16 ಗ್ರಾಮ ಪಂಚಾಯತ್ ಗಳಿಗೆ ಭೇಟಿ ನೀಡಲು ಸಾಧ್ಯವಾಗಿದೆ ಎಂದರು.
ಕಾರ್ಕಳ-ಬೆಂಗಳೂರು ನಡುವೆ ಕೊಂಡಿ ಕಾರ್ಯ:
ಕೇತ್ರದ ಮತದಾರರನ್ನು ಗಮನದಲ್ಲಿ ಇಟ್ಟು ಕಾರ್ಕಳ-ಬೆಂಗಳೂರು ಕಚೇರಿಗಳ ನಡುವೆ ಕೊಂಡಿಯಾಗಿ ಕೆಲಸ ಕಾರ್ಯಗಳನ್ನು ಸದಾ ನಿರ್ವಹಿಸುವುದಾಗಿ ಇದೇ ಸಂದರ್ಭದಲ್ಲಿ ಸಚಿವ ಸುನೀಲ್ಕುಮಾರ್ ಭರವಸೆ ನೀಡಿದರು.
ವಾರದ ಒಂದು ದಿನ ಕ್ಷೇತ್ರ, ಮತ್ತೊಂದು ದಿನ ಉಡುಪಿ ಜಿಲ್ಲೆಯಲ್ಲಿ ಉಳಿದ ಐದು ದಿನ ರಾಜ್ಯದಲ್ಲಿ ಜನಪರಸೇವೆಗಾಗಿ ಪ್ರವಾಸ ಕೈಗೊಳ್ಳುವುದಾಗಿ ಇದೇ ಸಂದರ್ಭದಲ್ಲಿ ಅವರು ತಿಳಿಸಿದರು.
ಈದು ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಅಧ್ಯಕ್ಷತೆ ವಹಿಸಿದರು. ಉಪಾಧ್ಯಕ್ಷ ವಿಜಯಕುಮಾರ್ ಜೈನ್ ಶುಭಾಂಶನೆಗೈದರು. ತಹಶೀಲ್ದಾರ್ ಪ್ರಕಾಶ್ ಮರಂಬಳ್ಳಿ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಗುರುದತ್, ಎಪಿಎಂಸಿ ಅಧ್ಯಕ್ಷ ರತ್ನಾಕರ ಅಮೀನ್,ಪೊಲೀಸ್ ವೃತ್ತನಿರೀಕ್ಷಕ ಸಂಪತ್ ಕುಮಾರ್, ಜಿಲ್ಲಾ ಪಂಚಾಯತ್ ನಿಕಟಪೂರ್ವ ಸದಸ್ಯೆ ದಿವ್ಯಾಶ್ರೀ ಅಮೀನ್, ಉದ್ಯಮಿ ಪ್ರೇಮ್ ಕುಮಾರ್ ಜೈನ್, ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.
ಪುರುಷೋತ್ತಮ ರಾವ್ ಸ್ವಾಗತಿಸಿ ಪ್ರಸ್ತಾವಿಕವಾಗಿ ಮಾತನಾಡಿದರು. ಕೃಷ್ಣ ಕುಮಾರ್ ಎನ್ ಇ ನಿರೂಪಿಸಿದರು. ಈದು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಆನಂದವಾರ್ತೆ ಧನ್ಯವಾದ ವಿತ್ತರು.
ಕ್ಯಾಷ್ಯನ್: ನಕ್ಸಲ್ ಪೀಡಿತ ಈದು ಗ್ರಾಮ ಪಂಚಾಯತ್ ಕಚೇರಿಯಲ್ಲಿ ಆಯೋಜಿಸಿದ ಜನಸ್ಪಂದನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವ ವಿ.ಸುನೀಲ್ಲ ಕುಮಾರ್. ಈದು ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಅಧ್ಯಕ್ಷತೆವಹಿಸಿದರು. ಉಪಾಧ್ಯಕ್ಷ ವಿಜಯಕುಮಾರ್ ಜೈನ್ ಶುಭಾಂಶನೆಗೈದರು. ತಹಶೀಲ್ದಾರ್ ಪ್ರಕಾಶ್ ಮರಂಬಳ್ಳಿ, ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಗುರುದತ್, ಎಪಿಎಂಸಿ ಅಧ್ಯಕ್ಷ ರತ್ನಾಕರ ಅಮೀನ್, ಜಿಲ್ಲಾ ಪಂಚಾಯತ್ ನಿಕಟಪೂರ್ವ ಸದಸ್ಯೆ ದಿವ್ಯಾಶ್ರೀ ಅಮೀನ್, ಪೊಲೀಸ್ ವೃತ್ತನಿರೀಕ್ಷಕ ಸಂಪತ್ ಕುಮಾರ್, ಉದ್ಯಮಿ ಪ್ರೇಮ್ ಕುಮಾರ್ ಜೈನ್, ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.