ಕಾಸರಗೋಡು, ಆ.28 (DaijiworldNews/HR): ಉಪ್ಪಳದ ಜುವಲ್ಲರಿಯೊಂದರಿಂದ ಕಳವು ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳನ್ನು ಡಿವೈಎಸ್ಪಿ ಬಾಲಕೃಷ್ಣನ್ ನಾಯರ್ ನೇತೃತ್ವದ ಪೊಲೀಸ್ ತಂಡ ಬಂಧಿಸಿದೆ.
ಬಂಧಿತರನ್ನು ತಮಿಳುನಾಡು ನಾಮಕ್ಕಲ್ನ ವೇಲಾ ಯುಧನ್ (46), ಕೊಯ ಮುತ್ತೂರಿನ ಸೈದಾಲಿ (49) ಮತ್ತು ರಾಜನ್ (51) ಎಂದು ಗುರುತಿಸಲಾಗಿದೆ.
ಉಪ್ಪಳದ ಎಸ್ಎಸ್ ಗೋಲ್ಡ್ ನಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧ ಪಟ್ಟಂತೆ ತಿಂಗಳುಗಳ ಬಳಿಕ ಆರೋಪಿಗಳನ್ನು ಬಂಧಿಸಲಾಗಿದೆ.
2020 ರ ನವಂಬರ್ 6ರಂದು ಕೃತ್ಯ ನಡೆದಿತ್ತು. ಬೀಗ ಮುರಿದು ಒಳನುಗ್ಗಿದ ಕಳ್ಳರು 65 ಗ್ರಾಂ ಚಿನ್ನಾಭರಣ ಹಾಗೂ ಎರಡು ಕಿಲೋ ಬೆಳ್ಳಿಯ ಆಭರಣಗಳನ್ನು ಕಳವು ಮಾಡಲಾಗಿತ್ತು. ಬಂಧಿತ ಆರೋಪಿಗಳು ಅಂತಾರಾಜ್ಯ ದರೋಡೆಕೋರರ ತಂಡ ದವರು ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನು ಕೇರಳ, ಕರ್ನಾಟಕ, ತಮಿಳುನಾಡು ಹಾಗೂ ಇನ್ನಿತರೆ ಕಡೆಗಳಲ್ಲಿ ಕಳವು ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.