ಮಂಗಳೂರು, ಆ 30 (DaijiworldNews/PY): ಆಡಿನ ಮರಿಯೊಂದನ್ನು ರಕ್ಷಿಸಲು ಹೋಗಿ ಯುವಕನೋರ್ವ ತನ್ನ ಎರಡು ಕಾಲುಗಳನ್ನು ಕಳೆದುಕೊಂಡ ಘಟನೆ ಜೋಕಟ್ಟೆಯಲ್ಲಿ ನಡೆದಿದೆ.
ಚೇತನ್ ಕುಮಾರ್ ಕಾಲು ಕಳೆದುಕೊಂಡ ಯುವಕ.
ಆಡಿನ ಮರಿಯೊಂದು ರೈಲು ಹಳಿಯುದ್ದಕ್ಕೂ ಓಡಾಡಿಕೊಂಡಿದ್ದನ್ನು ಕಂಡ ಚೇತನ್ ಆಡು ಮರಿಯ ರಕ್ಷಣೆಗೆ ಮುಂದಾಗಿದ್ದಾನೆ. ಆಡು ಮರಿಯನ್ನು ಹಳಿಯಿಂದ ಮೇಲೆತ್ತಿ ರಕ್ಷಿಸುವ ವೇಳೆ ರೈಲು ಬಂದು ಅಪ್ಪಳಿಸಿದ್ದು, ಚೇತನ್ ಕಾಲಿನ ಮೇಲೆಯೇ ರೈಲು ಹರಿದು ಹೋಗಿದೆ.
ಗಂಭೀರವಾಗಿ ಗಾಯಗೊಂಡಿದ್ದ ಚೇತನ್ ಅನ್ನು ತಕ್ಷಣವೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ವೈದ್ಯರು ಚೇತನ್ ಅವರ ಪರಿಸ್ಥಿತಿ ಪರಿಶೀಲಿಸಿದ್ದು, ಒಂದು ಕಾಲು ಉಳಿಸಬಹುದು ಎಂದಿದ್ದಾರೆ. ಆದರೆ, ಚೇತನ್ ಅವರು ಕುಟುಂಬದ ಆಧಾರವಾಗಿದ್ದು, ದಿಕ್ಕು ತೋಚದಂತಾಗಿದೆ.