ಉಡುಪಿ, ಆ 30 (DaijiworldNews/PY): "ಗಣೇಶೋತ್ಸವ ಆಚರಣೆ ಬಗ್ಗೆ ಜನರ ಬೇಡಿಕೆ ಇದೆ. ಜನರ ಬೇಡಿಕೆ ಸರಿಯಾಗಿದೆ. ಆದರೆ, ಜನರ ಆರೋಗ್ಯ ಕಾಪಾಡುವುದು ಸರ್ಕಾರದ ಆದ್ಯ ಕರ್ತವ್ಯ. ಕೇಂದ್ರ ಸರ್ಕಾರದ ಸೂಚನೆ ಹಾಗೈ ತಜ್ಞರ ವಿಚಾರಗಳನ್ನು ನೋಡಿ ಆಚರಣೆಗೆ ಅವಕಾಶ ನೀಡುತ್ತೇವೆ" ಎಂದು ಇಂಧನ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಗಣೇಶೋತ್ಸವ ಆಚರಣೆ ಬಗ್ಗೆ ಜನರ ಬೇಡಿಕೆ ಸರಿಯಾಗಿದೆ. ಕೇಂದ್ರ ಸರ್ಕಾರದ ಸೂಚನೆ ನೋಡಬೇಕು. ತಜ್ಞರು ಹೇಳಿರುವ ವಿಚಾರಳನ್ನು ಗಮನಿಸಬೇಕು. ತಜ್ಞರ ಅಭಿಪ್ರಾಯ ನೋಡಿ ಆಚರಣೆಗೆ ಅವಕಾಶ ನೀಡುತ್ತೇವೆ, ಇದನ್ನು ಅರ್ಥ ಮಾಡಿಕೊಂಡು ಜನರು ಸಹಕರಿಸಬೇಕು" ಎಂದಿದ್ದಾರೆ.
ಉಡುಪಿಯಲ್ಲಿ ಶಾಲಾರಂಭ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, "ಪಾಸಿಟಿವಿಟಿ ದರ ಹೆಚ್ಚಿದ್ದ ಕಾರಣಕ್ಕೆ ತರಗತಿಗಳು ಆರಂಭವಾಗಿರಲಿಲ್ಲ. ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದೆ. ಇದೊಂದಿ ಆಶಾದಾಯಕವಾದ ಬೆಳವಣಿಗೆ. ಕಳೆದ ಮೂರು ದಿನಗಳಲ್ಲಿ ಪಾಸಿಟಿವಿಟಿ ರೇಟ್ ಶೇ.1.4 ಇದೆ. ಈ ಹಿನ್ನೆಲೆ, ಶಾಲಾರಂಭ ಮಾಡುತ್ತೇವೆ" ಎಂದು ತಿಳಿಸಿದ್ದಾರೆ.
"9ನೇ ತರಗತಿಯಿಂದ ದ್ವಿತೀಯ ಪಿಯುವರೆಗೆ ಶಾಲಾರಂಭದ ಬಗ್ಗೆ ಜಿಲ್ಲಾಡಳಿತ ನಿರ್ಣಯ ಕೈಗೊಂಡಿದೆ. ಸೆ.1ರಿಂದ ತರಗತಿಗಳು ಆರಂಭವಾಗಲಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳು ಎಚ್ಚರಿಕೆಯಿಂದ ಗಮನಿಸಬೇಕು. ಶಿಕ್ಷಕರಿಗೆ ಕೊರೊನಾ ಸಲಿಕೆ ಕಡ್ಡಾಯ. ಕೊರೊನಾ ನಿಯಾಮವಳಿಯನ್ನು ಅರ್ಥೈಸಿಕೊಂಡು ತರಗತಿ ಆರಂಭಿಸಿ" ಎಂದಿದ್ದಾರೆ.