ಉಡುಪಿ, ಆ.31 (DaijiworldNews/HR): ಸಂತೆಕಟ್ಟೆಯಲ್ಲಿ ಪ್ರಿಯಕರನೊಬ್ಬ ತನ್ನ ಪ್ರೆಯಸಿಗೆ ಚಾಕುವಿನಿಂದ ಇರಿದು ಬಳಿಕ ತಾನು ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಯುವಕ ಮಂಗಳವಾರ ಮುಂಜಾನೆ ಮೃತಪಟ್ಟಿದ್ದಾನೆ.
ಅಂಬಾಗಿಲು ಸಮೀಪದ ಕಕ್ಕುಂಜೆಯಲ್ಲಿ ವಾಸಿಸುತ್ತಿರುವ ವಿಠಲ್ ಭಂಡಾರಿ ಮತ್ತು ಸುಶೀಲಾ ದಂಪತಿಯ ಪುತ್ರಿ ಸೌಮ್ಯಶ್ರೀ (28) ಸೋಮವಾರ ನಿಧನರಾಗಿದ್ದು, ಅಲೆವೂರು ರಾಂಪುರ ನಿವಾಸಿ ಸಂದೇಶ್ ಕುಲಾಲ್ (28) ಗಂಭೀರ ಸ್ಥಿತಿಯಲ್ಲಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದು ಇಂದು ಮೃತಪಟ್ಟಿದ್ದಾರೆ.
ಸಂತೆಕಟ್ಟೆಯಲ್ಲಿ ರಾಷ್ಟ್ರೀಕೃತ ಬ್ಯಾಂಕೊಂದಕ್ಕೆ ಡೇಟಾ ಎಂಟ್ರಿ ಆಪರೇಟರ್ ಆಗಿ ಸೌಮ್ಯಶ್ರೀ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದ್ದು, ಸಂದೇಶ್ ಕುಲಾಲ್ ನಗರದ ಮೆಡಿಕಲ್ ಶಾಪ್ನ ಕಂಪ್ಯೂಟರ್ ಆಪರೇಟರ್ ಆಗಿದ್ದರು.
ಸಂದೇಶ್ ಕುಲಾಲ್ ಮತ್ತು ಸೌಮ್ಯಶ್ರೀ ಕಳೆದ ಏಳೆಂಟು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಸೌಮ್ಯಶ್ರೀ ಅವರ ಇಬ್ಬರು ಸಹೋದರರು ವಿದೇಶದಲ್ಲಿ ಕೆಲಸ ಮಾಡುತ್ತಿದ್ದಾರೆ ಮತ್ತು ಆಕೆಯ ತಂದೆ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಜಾತಿ ಮತ್ತು ಇತರ ಭಿನ್ನಾಭಿಪ್ರಾಯಗಳಿಂದಾಗಿ ಇವರ ಪೋಷಕರು ಮದುವೆಗೆ ಒಪ್ಪಲಿಲ್ಲ. ಮೂಡುಬಿದಿರೆಯ ಯುವಕರೊಂದಿಗೆ ಸೌಮ್ಯಶ್ರೀಗೆ ನಿಶ್ಚಿತಾರ್ಥ ಸಮಾರಂಭವನ್ನು ನಡೆಸಲಾಯಿತು ಎಂದು ಹೇಳಲಾಗಿದೆ. ಈ ಬೆಳವಣಿಗೆಯಿಂದ ಕೋಪಗೊಂಡ ಸಂದೇಶ್ ತನ್ನ ಪ್ರಿಯಕರನೊಂದಿಗೆ ಜಗಳವಾಡಿದ್ದಾನೆ ಎಂದು ಹೇಳಲಾಗಿದೆ.
ಸೋಮವಾರ ಸಂಜೆ ತನ್ನ ಸ್ಕೂಟರಿನಲ್ಲಿ ಮನೆಗೆ ಹೋಗುತ್ತಿದ್ದ ಸೌಮ್ಯಶ್ರೀ ಅವರನ್ನು ರಾಷ್ಟ್ರೀಯ ಹೆದ್ದಾರಿಯಲ್ಲಿ ಮೋಟಾರ್ ಬೈಕ್ ನಲ್ಲಿ ಬಂದ ಸಂದೇಶ್ ತಡೆದರು. ಇಬ್ಬರ ನಡುವೆ ಮಾತಿನ ಚಕಮಕಿ ನಡೆದ ನಂತರ, ಸಂದೇಶ್ ತನ್ನ ಬ್ಯಾಗಿನಲ್ಲಿ ಬಚ್ಚಿಟ್ಟಿದ್ದ ಚಾಕುವಿನಿಂದ ಸೌಮ್ಯಶ್ರೀಗೆ ಇರಿದಿದ್ದು ಬಳಿಕ ಅದೇ ಚಾಕುವಿನಿಂದ ತನ್ನ ಕುತ್ತಿಗೆಯನ್ನು ಸೀಳಿಕೊಂಡಿದ್ದಾನೆ. ಸ್ಥಳೀಯರು ತಕ್ಷಣ ಸ್ಥಳಕ್ಕೆ ಧಾವಿಸಿ ಇಬ್ಬರನ್ನೂ ಮಣಿಪಾಲದ ಆಸ್ಪತ್ರೆಗೆ ದಾಖಲಿಸಿದ್ದು, ಇದೀಗ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಮೃತಪಟ್ಟಿದ್ದಾರೆ.
ಘಟನೆಯ ಸ್ಥಳದಲ್ಲಿ, ಇಬ್ಬರ ಪ್ರೇಮಿಗಳ ದ್ವಿಚಕ್ರ ವಾಹನಗಳು, ಒಂದು ಬ್ಯಾಗ್, ಚಾಕು ಇತ್ಯಾದಿಗಳು ಪತ್ತೆಯಾಗಿವೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ, ಕುಮಾರ್ ಚಂದ್ರ ಮತ್ತು ಉಡುಪಿ ನಗರ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಪ್ರಮೋದ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿದರು.
ಸೋಮವಾರ ಸಂಜೆ ಸೌಮ್ಯಶ್ರೀ ಅವರ ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಮಂಗಳವಾರದ ನಂತರ ಸಂದೇಶ್ ಅವರ ಮರಣೋತ್ತರ ಪರೀಕ್ಷೆ ನಡೆಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.