ಕಾಸರಗೋಡು, ಸೆ. 01 (DaijiworldNews/SM): ಪತ್ನಿಯ ಮೇಲೆ ಸೀಮೆ ಎಣ್ಣೆ ಸುರಿದು ಕೊಲೆಗೆ ಯತ್ನಿಸಿದ ಘಟನೆ ಕುಂಬಳೆಯಲ್ಲಿ ನಡೆದಿದ್ದು, ಪತಿ ವಿರುದ್ಧ ಮೊಕದ್ದಮೆ ದಾಖಲಿಸಲಾಗಿದೆ.
ಕುಂಬಳೆ ಕೊಟ್ಟೋರಿಯ ಬಾಡಿಗೆ ಮನೆಯಲ್ಲಿ ವಾಸವಾಗಿರುವ ರುಕ್ಸಾನ(26) ನೀಡಿರುವ ದೂರಿನಂತೆ ಪತಿ ಹಬೀಬ್ ವಿರುದ್ಧ ಕೊಲೆ ಯತ್ನ ಮೊಕದ್ದಮೆ ಹೂಡಲಾಗಿದ. ಮೊಗ್ರಾಲ್ ಕಡವತ್ ನಲ್ಲಿರುವ ರುಕ್ಸನಾಳ ತಾಯಿ ಮನೆಯಲ್ಲಿ ಘಟನೆ ನಡೆದಿದೆ.
ಹಬೀಬ್ ಆಗಾಗ ಪತ್ನಿಗೆ ಕಿರುಕುಳ ನೀಡುತ್ತಿದ್ದನೆನ್ನಲಾಗಿದೆ. ಎರಡು ದಿನಗಳ ಹಿಂದೆ ಕಿರುಕುಳದ ಬಗ್ಗೆ ಕಾಸರಗೋಡು ಪೊಲೀಸರಿಗೆ ದೂರು ನೀಡಿದ್ದು, ದೂರು ನೀಡಿ ಮರಳಿದಾಗ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿರುವುದಾಗಿ ಪ್ರಕರಣ ದಾಖಲಿಸಲಾಗಿದೆ.