ಕಾಸರಗೋಡು, ಸ. 02 (DaijiworldNews/HR): ವಿದ್ಯಾರ್ಥಿಯನ್ನು ಅಪಹರಿಸಿ ಕೊಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನನ್ನು ಕಾಸರಗೋಡು ಡಿವೈಎಸ್ಪಿಪಿ ಬಾಲಕೃಷ್ಣನ್ ನಾಯರ್ ನೇತೃತ್ವದ ಪೊಲೀಸ್ ತಂಡ ಬಂಧಿಸಿದೆ.
ಬಂಧಿತನನ್ನು ಪೈವಳಿಕೆ ಕುರುವೇರಿಯ ಅರ್ಷಾದ್ (19) ಎಂದು ಗುರುತಿಸಲಾಗಿದೆ.
ಪೈವಳಿಕೆ ಸುಬ್ಬಯ್ಯಕಟ್ಟೆಯ ವಿದ್ಯಾರ್ಥಿಯೋರ್ವನನ್ನು ಅಪಹರಿಸಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈತನನ್ನು ಬಂಧಿಸಲಾಗಿದೆ.