ಮಂಗಳೂರು, ಸೆ 3 (DaijiworldNews/MS): ನಗರದ ಹೊರವಲಯದಲ್ಲಿರುವ ಎದುರುಪದವು ಎಂಬಲ್ಲಿ ಕ್ಷುಲ್ಲಕ ಕಾರಣಕ್ಕೆ ದುಷ್ಕರ್ಮಿಗಳ ತಂಡವೊಂದು ವ್ಯಕ್ತಿಯೊಬ್ಬರಿಗೆ ಚೂರಿಯಲ್ಲಿ ಇರಿದ ಘಟನೆ ಸೆ. 02 ರ ಗುರುವಾರ ತಡರಾತ್ರಿ ನಡೆದಿದೆ.
ಬಾಗಲಕೋಟೆ ಮೂಲದ ನಿಂಗಣ್ಣ ಚೂರಿ ಇರಿತಕ್ಕೊಳಗಾದ ವ್ಯಕ್ತಿಯಾಗಿದ್ದಾರೆ. ಮದ್ಯಪಾನದ ಅಮಲಿನಲ್ಲಿ ನಿಂಗಣ್ಣ ಹಾಗೂ ತಂಡದೊಂದಿಗೆ ಮಧ್ಯೆ ಮಾತಿನ ಚಕಮಕಿ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಜಗಳ ಪ್ರಾರಂಭವಾಗಿ ಕೊನೆಗೆ ಚೂರಿ ಇರಿಯುವ ಹಂತಕ್ಕೆ ಹೋಗಿದೆ.
ಇರಿತದಲ್ಲಿ ಭಾಗಿಯಾದ ಜನರು ಎದುರುಪದವು ನಿವಾಸಿ ದಿವಾಕರ್ ಅಲಿಯಾಸ್ ದಿವಾ ಗ್ಯಾಂಗ್ಗೆ ಸೇರಿದವರು ಎಂದು ತಿಳಿದುಬಂದಿದೆ.
ಚೂರಿ ಇರಿತದ ಪರಿಣಾಮ ನಿಂಗಣ್ಣ ತಲೆಗೆ ಗಾಯವಾಗಿದ್ದು, ಪರಿಣಾಮ ತೀವ್ರ ರಕ್ತಸ್ರಾವವಾಗಿದೆ. ಗಾಯಾಳು ನಿಂಗಣ್ಣ ಅವರನ್ನು ವೆನ್ಲಾಕ್ ಆಸೊಅತ್ರೆಗೆ ದಾಖಲಿಸಲಾಗಿದೆ.
ಕಾವೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.