ಮಂಗಳೂರು, ಸೆ. 03 (DaijiworldNews/SM): ದ.ಕ. ಜಿಲ್ಲೆಯಲ್ಲಿ ಕಳೆದ ವಾರದಂತೆ ಈ ವಾರವೂ ವೀಕೆಂಡ್ ಕರ್ಫ್ಯೂ ಮುಂದುವರೆದಿದೆ. ಇದರೊಂದಿಗೆ ಉಡುಪಿ ಜಿಲ್ಲೆಯಲ್ಲೂ ವಾರಾಂತ್ಯ ಕರ್ಫ್ಯೂ ಇಂದು ಜಾರಿಗೆ ಬಂದಿದೆ. ಇಂದು ರಾತ್ರಿ ಒಂಬತ್ತು ಗಂಟೆಯಿಂದ ವಾರಾಂತ್ಯ ಕರ್ಫ್ಯೂ ಜಾರಿಗೆ ಬಂದಿದೆ.
ಶನಿವಾರ ಹಾಗೂ ರವಿವಾರದಂದು ಈ ಹಿಂದೆ ದ.ಕ. ಜಿಲ್ಲೆಯಲ್ಲಿದ್ದ ನಿಯಮಗಳೇ ಜಾರಿಯಲ್ಲಿರಲಿದೆ. ಮಧ್ಯಾಹ್ನ 2 ಗಂಟೆಯ ತನಕ ಅಗತ್ಯ ವಸ್ತುಗಳು ಲಭ್ಯವಿದೆ. ಉಳಿದಂತೆ ಬಸ್ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಧ್ಯಾಹ್ನ ಎರಡು ಗಂಟೆಯ ಬಳಿಕ ಅಂಗಡಿ ಮುಂಗಟ್ಟುಗಳು ಬಂದ್ ಆಗಲಿದೆ. ಆದರೆ, ಮೆಡಿಕಲ್ ಗಳು ಓಪನ್ ಇರಲಿದ್ದು, ತುರ್ತು ಸೇವೆ ಪಡೆಯಲು ಅವಕಾಶವಿದೆ. ಇನ್ನು ಸಿಇಟಿ ಪರೀಕ್ಷೆ ನಡೆಯುತ್ತಿದ್ದು ವಿದ್ಯಾರ್ಥಿಗಳು ಹಾಲ್ ಟಿಕೆಟ್ ತೋರಿಸಿ ಸಂಚರಿಸಬಹುದಾಗಿದೆ.
ಉಡುಪಿ ಜಿಲ್ಲೆಯಲ್ಲಿ ಬಸ್ ಸಂಚಾರ ಇರಲಿದೆ. ಉಳಿದಂತೆ ಕೆಲವು ಚಟುವಟಿಕೆಗಳಿಗೆ ವಿನಾಯಿತಿ ನೀಡಲಾಗಿದೆ. ಧಾರ್ಮಿಕ ಕೇಂದ್ರಗಳಲ್ಲಿ ಸಾರ್ವಜನಿಕರು ಭಾಗವಹಿಸುವಂತಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.