ಕಾರ್ಕಳ, ಸೆ. 07 (DaijiworldNews/PY): "ರಕ್ತದಾನಗೈಯುವ ವ್ಯಕ್ತಿ ಆರೋಗ್ಯ ಪೂರ್ಣ ಬದುಕು ನಡೆಸಬಹುದು. ರಕ್ತದಾನ ಶಿಬಿರ ಆಯೋಜಿಸುವ ಮೂಲಕ ರಕ್ತದಾನದ ಮಹತ್ವ ತಿಳಿಸುವ ಜೊತೆ ಹಲವು ಜೀವಗಳ ರಕ್ಷಣೆ ಮಾಡಲು ಸಾಧ್ಯವಿದೆ" ಎಂದು ರೆಡ್ ಕ್ರಾಸ್ ಸೊಸೈಟಿಯ ಕಾರ್ಕಳ ಘಟಕದ ಅಧ್ಯಕ್ಷ ಡಾಕ್ಟರ್ ರಾಮಚಂದ್ರ ಜೋಶಿ ಹೇಳಿದರು.
ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆ (ರಿ) ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕಾರ್ಕಳ,ಕೆರ್ವಾಶೆ ಗ್ರಾಮಪಂಚಾಯತ್, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೆರ್ವಾಶೆ ಮೈನ್, ಯುವಜನ ವೇದಿಕೆ (ರಿ), ಕೆರ್ವಾಶೆ, ರೋಟರಿ ಸಂಸ್ಥೆ ಕಾರ್ಕಳ, ರಬ್ಬರ್ ಉತ್ಪಾದಕರ ಸಂಘ ಕೆರ್ವಾಸೆ, ಇವರ ಆಶ್ರಯದಲ್ಲಿ ಜಿಲ್ಲಾ ರಕ್ತನಿಧಿ ಕೇಂದ್ರ ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಉಡುಪಿ ಇವರ ಸಹಯೋಗದಲ್ಲಿ ಕೆರ್ವಾಶೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ ಬೃಹತ್ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಇದೇ ಸಂದರ್ಭದಲ್ಲಿ 35ಕ್ಕೂ ಹೆಚ್ಚಿನ ಯುನಿಟ್ ರಕ್ತವನ್ನು ದಾನ ಮಾಡಲಾಯಿತು.
ಜಿಲ್ಲಾ ರಕ್ತನಿಧಿ ಕೇಂದ್ರ ಜಿಲ್ಲಾ ಆಸ್ಪತ್ರೆ ಅಜ್ಜರಕಾಡು ಇದರ ಮುಖ್ಯ ವೈದ್ಯಾಧಿಕಾರಿ ಡಾ ವೀಣಾ ಕುಮಾರಿ, ಕೆರ್ವಾಸೆ ಪಂಚಾಯತ್ ಅಧ್ಯಕ್ಷೆ ಜಯಂತಿ , ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧ್ಯಕ್ಷ ಪ್ರಶಾಂತ್ ಡಿಸೋಜಾ, ಕೆರ್ವಾಶೆ ರಬ್ಬರ್ ಉತ್ಪಾದಕರ ಸಂಘದ ಅಧ್ಯಕ್ಷ ಡಯಾಸ್ ಚೆರಿಯನ್, ಗೌರವ ಶಿಕ್ಷಕಿ ಪ್ರತಿಮಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸುರೇಶ್ ನಾಯಕ್ ಅಧ್ಯಕ್ಷತೆ ವಹಿಸಿದ್ದರು.
ಶಾಲಾಭಿವೃದ್ಧಿ ಸಮಿತಿಯ ಸದಸ್ಯ ಸದಾನಂದ ಸಾಲ್ಯಾನ್ ಸ್ವಾಗತಿಸಿದರು. ಸುಹಾಸಿನಿ ನಿರೂಪಿಸಿದರು. ಶಾಲಾಭಿವೃದ್ಧಿ ಮಂಡಳಿ ಅಧ್ಯಕ್ಷ ಅಶ್ವತ್ಥ್ ನಾರಾಯಣ್ ನಾಯಕ್ ಧನ್ಯವಾದ ವಿತ್ತರು.