ಕಾರ್ಕಳ, ಸೆ. 08 (DaijiworldNews/PY): ಕಾಂತಾವರ ಯಕ್ಷದೇಗುಲ ಸಂಸ್ಥೆಯು ಪ್ರಸಕ್ತ ವರ್ಷಾವಧಿಯಲ್ಲಿ ರಾಜಕೀಯ ನೇತಾರ ಮಾಜಿ ಶಾಸಕ ಕುಂಬ್ಳೆ ಸುಂದರರಾವ್ ದಂಪತಿಯನ್ನು ಅವರ ಸ್ವಗೃಹದಲ್ಲಿ ಶಾಲು ಹೊದಿಸಿ ಫಲಪುಷ್ಪ ಗುಚ್ಛ ನೀಡಿ ಸನ್ಮಾನಿಸಲಾಯಿತು.
ಸನ್ಮಾನಿತಗೊಂಡ ಕುಂಬ್ಳೆ ಸುಂದರರಾವ್ ಅವರು ಪ್ರಸಕ್ತ ತೆಂಕುತಿಟ್ಟಿನ ಅಗ್ರಮಾನ್ಯ ಕಲಾವಿದರಾಗಿ ಧರ್ಮಸ್ಥಳದ ಮೇಳದಲ್ಲಿ ಹಲವು ವರ್ಷಗಳ ಕಾಲ ಕಲಾವಿದರಾಗಿ ಸೇವೆ ಸಲ್ಲಿಸಿದರು.
ಕಾಂತಾವರ ಯಕ್ಷದೇಗುಲ ಕಾಂತಾವರ ರಿ. ಸಂಸ್ಥೆಯು ಕಳೆದ ಹತ್ತೊಂಬತ್ತು ವರ್ಷಗಳಿಂದ ಯಕ್ಷಗಾನದ ಆಟ ಕೂಟ , ಗಾನ ನಾಟ್ಯ ವೈಭವ , ಯಕ್ಷ ನಾಟ್ಯಶಿಕ್ಷಣ ಶಿಬಿರ ಹೀಗೆ ವಿವಿದ ಪ್ರಕಾರಗಳನ್ನು ಸಂಯೋಜನೆ ಮಾಡುತ್ತಾ ಬಂದಿದೆ. ಪ್ರತಿ ವಾರ್ಷಿಕ ಸಮಾರಂಭಗಳಲ್ಲಿ ಯಕ್ಷಗಾನ ರಂಗದ ಸಾಧನಾ ಶೀಲ ಕಲಾವಿದರನ್ನು ಸನ್ಮಾನಿಸುತ್ತಿದೆ.
ಸಂಸ್ಥೆಯ ಅಧ್ಯಕ್ಷ ಬೆಳುವಾಯಿ ಶ್ರೀಪತಿರಾವ್ ಅಧ್ಯಕ್ಷತೆ ವಹಿಸಿದ್ದರು. ಧರ್ಮರಾಜ ಕಂಬಳಿ ಕಾಂತಾವರ, ರಮೇಶ ಶೆಟ್ಟಗಾರ್, ದೇವಾನಂದ್ ಭಟ್ ಬೆಳುವಾಯಿ ಪ್ರಧಾನ ಕಾರ್ಯದರ್ಶಿ ಮಹಾವೀರ ಪಾಂಡಿ ಕಾಂತಾವರ, ಮಧುಸೂದನ್ ಭಟ್ ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.