ಉಡುಪಿ, ಸೆ 09(DaijiworldNews/MS): ಕೊಂಕಣ ರೈಲ್ವೆ ಗಣೇಶ ಚತುರ್ಥಿ ಹಿನ್ನಲೆಯಲ್ಲಿ 224 ವಿಶೇಷ ಟ್ರಿಪ್ ಗಳನ್ನು ಪ್ರಾರಂಭಿಸಿದೆ. ಪ್ರಯಾಣಿಕರ ಆರೋಗ್ಯದ ದೃಷ್ಟಿಯಿಂದ ಕೊರೋನಾ ಮಾರ್ಗಸೂಚಿಗಳನ್ನು ಅಳವಡಿಸಿಕೊಂಡಿದೆ.
ಪ್ರತಿಯೊಂದು ರೈಲ್ವೆ ನಿಲ್ದಾಣದಲ್ಲಿ ನಿರ್ಗಮನ ಪ್ರಯಾಣಿಕರ ಉಷ್ಣತೆ ಪರಿಶೀಲನೆ, ಪ್ರಥಮ-ಚಿಕಿತ್ಸಾ ವೈದ್ಯಕೀಯ ಸೌಲಭ್ಯಗಳನ್ನು ಸ್ಥಾಪಿಸಲಾಗಿದೆ, ಪ್ರಯಾಣಿಕರ ಅನುಕೂಲಕ್ಕಾಗಿ ಪ್ರಮುಖ ನಿಲ್ದಾಣಗಳಲ್ಲಿ ಆಹಾರ ಮಳಿಗೆಗಳನ್ನು ತೆರೆಯಲು ಹಾಗೂ ಕಾರ್ಯ ನಿರ್ವಹಿಸುವಂತೆ ಸೂಚಿಸಲಾಗಿದೆ.
ಹೆಚ್ಚುವರಿ ಭದ್ರತೆಗಾಗಿ ಆರ್ ಪಿಎಫ್ ಸಿಬ್ಬಂದಿಯೊಂದಿಗೆ ಹೆಚ್ಚುವರಿ ರೈಲ್ವೆ ಭದ್ರತಾ ಸಿಬ್ಬಂದಿಯನ್ನು ಜನಸಂದಣಿ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಮತ್ತು ಭದ್ರತಾ ವ್ಯವಸ್ಥೆಗಳನ್ನು ನಿರ್ವಹಿಸಲು ನಿಯೋಜಿಸಲಾಗಿದೆ.
ತುರ್ತು ಸಂಪರ್ಕಕ್ಕೆ ಆರ್ಪಿಎಫ್ ಸಿಬ್ಬಂದಿಗೆ ಟ್ವೀಟ್ ಅಥವಾ ಸಹಾಯವಾಣಿ ಸಂಖ್ಯೆ 139 ಸಂಪರ್ಕಿಸಬಹುದಾಗಿದೆ.