ಬಂಟ್ವಾಳ, ಸೆ 09 (DaijiworldNews/MS): ಬೈಕ್ ನಲ್ಲಿ ಬಂದ ದುಷ್ಕರ್ಮಿಗಳಿಬ್ಬರು ದಾರಿ ಕೇಳುವ ನೆಪದಲ್ಲಿ ಮಹಿಳೆಯನ್ನು ಮಾತಿಗೆಳೆದು ಬಳಿಕ ಮಾಂಗಲ್ಯ ಸರ ಅಪಹರಿಸಿದ ಘಟನೆ ಸಜಿಪಮೂಡ ಗ್ರಾಮದ ಮಾರ್ನಬೈಲು ಸಮೀಪ ನಡೆದಿದೆ.
ಬೈಕ್ ನಲ್ಲಿ ಬಂದ ಇಬ್ಬರು ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ನಿಲ್ಲಿಸಿ ದಾರಿ ಕೇಳಿದ್ದಾರೆ ಬಳಿಕ ಮಹಿಳೆ ವಿಳಾಸ ಹೇಳುವ ಸಂದರ್ಭ ಕರಿಮಣಿ ಸರವನ್ನು ಸೆಳೆದು ಪರಾರಿಯಾಗಿದ್ದಾರೆ. ಮಾರ್ನಬೈಲು ಬೊಳ್ಳಾಯಿಯ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವತ್ಸಲಾ ನಾರಾಯಣ ಎಂಬವರ ಬಳಿ ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತರು ಈ ಕೃತ್ಯವೆಸಗಿದ್ದು, ಸುಮಾರು 12 ಗ್ರಾಂ ತೂಕದ ಕರಿಮಣಿ ಸರ ಕದ್ದೊಯ್ದಿದ್ದಾರೆ.
ಈ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.