ಮಂಗಳೂರು, ಸ.10 (DaijiworldNews/HR): ನಗರದ ಕೇಶವ ಸ್ಮೃತಿ ಸಂವರ್ಧನ ಸಮಿತಿಯ ಆಶ್ರಯದಲ್ಲಿ 74 ನೇ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಘನಿಕೇತನದಲ್ಲಿ ಈ ಬಾರಿ ಅತ್ಯಂತ ಸರಳ ರೀತಿಯಲ್ಲಿ ನಡೆಯುತ್ತಿದೆ.
ಈ ಪ್ರಯುಕ್ತ ಶ್ರೀ ದೇವರ ಮ್ರಿತಿಕೆಯ ವಿಗ್ರಹವನ್ನು ಮೆರವಣಿಗೆಯಲ್ಲಿ ಗುರುವಾರದಂದು ತರಲಾಗಿದ್ದು, ಇಂದು ಬೆಳೆಗ್ಗೆ ಸಾರ್ವಜನಿಕ ಗಣೇಶೋತ್ಸವದ ಉದ್ಘಾಟನೆಯು ದೀಪ ಬೆಳಗಿಸುವುದರ ಮುಖೇನ ಚಾಲನೆ ನೀಡಲಾಯಿತು.
ಶ್ರೀ ದೇವರ ವಿಗ್ರಹ ಪ್ರತಿಷ್ಠಾಪನೆ, ಗಣಹೋಮ ರಾತ್ರಿ ಮೂಡಗಣಪತಿ ಸೇವೆ, ರಂಗ ಪೂಜೆ ಬಳಿಕ ಮಂಗಳಾರತಿ ನಡೆಯಲಿದೆ.
ಐದು ದಿನಗಳ ಪರ್ಯಂತ ಸಂಘನಿಕೇತನದಲ್ಲಿ ನಡೆಯಲಿದ್ದು, ಮಹಾಮಾರಿ ತಡೆಗಟ್ಟುವ ಹಿನ್ನೆಲೆಯಲ್ಲಿ ಸರಕಾರದ ಆದೇಶ ಪ್ರಕಾರ ಎಲ್ಲ ರೀತಿಯಲ್ಲಿ ನಿಯಮ ಪಾಲಿಸಿ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದ್ರೆಯಾಗದಂತೆ ಕಾರ್ಯಕ್ರಮ ಆಯೋಜಿಸಲಾಗಿದೆ .
ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಪ್ರವೀಣ್ ಕುಮಾರ್, ರಘುವೀರ್ ಕಾಮತ್ , ವಿನೋದ್ ಶೆಣೈ , ಜೀವನರಾಜ್ ಶೆಣೈ , ಸತೀಶ್ ಪ್ರಭು , ಸುರೇಶ ಕಾಮತ್ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.