ನೆಲ್ಯಾಡಿ, ಸೆ 11 (DaijiworldNews/MS): ಇಲ್ಲಿನ ಉದನೆಯ ಗಣಪತಿ ಕಟ್ಟೆಯನ್ನು ಕಿಡಿಗೇಡಿಗಳು ಹಾನಿಗೊಳಿಸಿರುವ ಘಟನೆ ಸೆ.10 ರ ರಾತ್ರಿ ನಡೆದಿದೆ.
ಉದನೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಸೆ.10ರಂದು ಉದನೆ ಗಣಪತಿ ಕಟ್ಟೆಯಲ್ಲಿ ಸರಳವಾಗಿ ಗಣೇಶೋತ್ಸವ ಆಚರಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಗಣಪತಿ ಕಟ್ಟೆಯ ಮೆಟ್ಟಿಲನ್ನು ಬಾಳೆಗಿಡಗಳಿಂದ ಅಲಂಕರಿಸಲಾಗಿತ್ತು. ಆದರೆ ರಾತ್ರಿ ವೇಳೆ ಕಿಡಿಗೇಡಿಗಳು ಬಾಳೆಗಿಡಗಳನ್ನು ಹಾಳುಮಾಡಿ ಮೆಟ್ಟಿಲನ್ನು ಹಾನಿಗೊಳಿಸಲಾಗಿದೆ.
ಕಲ್ಲು ಎತ್ತಿಹಾಕಿ ಮೆಟ್ಟಿಲು ಹಾಗೂ ಮೆಟ್ಟಿಲಿನ ಬದಿಗಳನ್ನು ಹಾನಿಗೊಳಿಸಿರುವುದಾಗಿ ವರದಿಯಾಗಿದೆ. ನೆಲ್ಯಾಡಿ ಹೊರಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.