ಕಾಪು, ಸೆ 13 (DaijiworldNews/MS): ಸಿದ್ಧರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಈಗಿನಿಂದಲೆ ಮುಖ್ಯಮಂತ್ರಿ ಕುರ್ಚಿಗಾಗಿ ಕನಸು ಕಾಣುತ್ತಿದ್ದಾರೆ. ಆದರೆ ಅವರು ಇನ್ನು 20 ವರ್ಷಗಳವರೆಗೆ ಸಿಎಂ ಕುರ್ಚಿಯನ್ನು ಏರುವುದಿಲ್ಲ. ಯಾಕೆಂದರೆ ಮುಂದಿನ ಚುನಾವಣೆಯಲ್ಲಿಯೂ ರಾಜ್ಯದಲ್ಲಿ ಬಿಜೆಪಿ ಅಧಿಕಾರ ಗೆಲ್ಲಲಿದೆ ಎಂದು ಬಿಜೆಪಿ ಅಧ್ಯಕ್ಷ ಹಾಗೂ ಸಂಸದ ನಳಿನ್ ಕುಮಾರ್ ಕಟೀಲು ಹೇಳಿದ್ದಾರೆ.
ಅವರು ಭಾನುವಾರ ಉಡುಪಿ ಜಿಲ್ಲೆಯ ಕಾಪು ವಿದ್ಯಾಸಭಾ ಕ್ಷೇತ್ರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.
ಭಾರತವೂ ಪ್ರಧಾನಿ ಮೋದಿ ಅವರ ಅದ್ಬುತವಾದ ದೃಢವಾದ ಚಿಂತನೆ ಮತ್ತು ಯೋಜನಾ ಆಡಳಿತದಿಂದ ಪ್ರಗತಿಯತ್ತ ದಾಪುಗಾಲು ಹಾಕುತ್ತಿದೆ. ಬೆಳಗಾವಿಯಲ್ಲಿ ಮತದಾರರು ಬಿಜೆಪಿಯನ್ನು ಗೆಲ್ಲಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆಯ ಗುಲ್ಬರ್ಗ ಕ್ಷೇತ್ರದಲ್ಲಿ ಕಮಲ ಅರಳಿದ್ದು ಕಾಂಗ್ರೆಸ್ ಕೋಟೆ ಛಿದ್ರಗೊಂಡಿದೆ. ಇಡೀ ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷದ ವಾತಾವರಣವನ್ನು ಹೊಂದಿದೆ ಎಂದು ಅವರು ಹೇಳಿದರು.
ನಳಿನ್ ಕಟೀಲ್ ಅವರು " ಪಕ್ಷದ ಶಾಸಕರೆಲ್ಲರೂ ಬೂತ್ ಅಧ್ಯಕ್ಷರಿಗೆ ವಿಶ್ವಾಸ ತುಂಬಿಸುವ ಮತ್ತು ಬಿಜೆಪಿ ಬೂತ್ ಮಟ್ಟದ ಅಧ್ಯಕ್ಷರಲ್ಲಿ ಆತ್ಮವಿಶ್ವಾಸವನ್ನು ಮೂಡಿಸಲು ಹಾಗೂ ಪಕ್ಷವನ್ನು ಬಲಪಡಿಸುವಂತೆ ಒತ್ತಾಯಿಸಿದರು. ಪಕ್ಷದ ಬೂತ್ ಮಟ್ಟದ ಘಟಕಗಳನ್ನು ಬಲಪಡಿಸುವುದು ಚುನಾವಣಾ ಕಾರ್ಯತಂತ್ರದ ಒಂದು ಭಾಗವಾಗಿದೆ ಎಂದು ಅವರು ಹೇಳಿದರು. ವೇಗವಾಗಿ ಸಮೀಪಿಸುತ್ತಿರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ತಮ್ಮ ಪಕ್ಷವು ಅಧಿಕಾರಕ್ಕೆ ಏರುತ್ತದೆ" ಎಂದು ವಿಶ್ವಾಸ ವ್ಯಕ್ತಪಡಿಸಿದರು.