ಮಂಗಳೂರು, ಸೆ. 13 (DaijiworldNews/SM): ರಾಜ್ಯ ಸಭಾ ಸದಸ್ಯ, ಕೇಂದ್ರದ ಮಾಜಿ ಸಚಿವ ಹಾಗೂ ಕಾಂಗ್ರೆಸ್ ನ ಹಿರಿಯ ಮುಖಂಡ ಆಸ್ಕರ್ ಫೆರ್ನಾಂಡಿಸ್ ಸೆಪ್ಟೆಂಬರ್ 13ರ ಸೋಮವಾರದಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ರಾಜಕೀಯವಾಗಿ ಹಲವು ಸ್ಥರಗಳಲ್ಲಿ ಸೇವೆ ಸಲ್ಲಿಸಿರುವ ಆಸ್ಕರ್ ಅಜಾತಶತ್ರು ಎಣಿಸಿಕೊಂಡಿದ್ದರು. ಹಲವು ಮಂದಿಗೆ ಆದರ್ಶರೆಣಿಸಿಕೊಂಡಿದ್ದರು. ರಾಜ್ಯ ಸಭೆಯಲ್ಲಿ ಹಲವು ವಿಚಾರಗಳನ್ನು ಪ್ರಸ್ತಾಪಿಸಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಪ್ರಯತ್ನ ನಡೆಸಿದ್ದರು. ಆದರೆ, ಕಳೆದ ಒಂದು ತಿಂಗಳಿಂದ ಅನಾರೋಗ್ಯದಲ್ಲಿದ್ದ ಆಸ್ಕರ್ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ದೇಶದ ಪ್ರಧಾನಿ ನರೇಂದ್ರ ಮೋದಿ, ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ರಾಜ್ಯದ ಕಾಂಗ್ರೆಸ್ ಮುಖಂಡರು ಸೇರಿದಂತೆ ಹಲವರು ಕಂಬಣಿ ಮಿಡಿದಿದ್ದಾರೆ. ಅಲ್ಲದೆ, ರಾಷ್ಟ್ರಪತಿ ರಾಮಾನಂದ ಕೋವಿಂದ್ ಅವರು ಕೂಡ ಅಗಲಿದ ನಾಯಕನಿಗೆ ಸಂತಾಪ ಸೂಚಿಸಿದ್ದಾರೆ.