ಬಂಟ್ವಾಳ, ಸೆ. 13 (DaijiworldNews/SM): ಯುವಕನೋರ್ವನನ್ನು ಕಡಿದು ಕೊಲೆ ಮಾಡಿದ ಘಟನೆಯೊಂದು ಬಂಟ್ವಾಳ ತಾಲೂಕಿನ ಕಕ್ಯೆಪದವು ಕೊಡ್ಯಮಲೆ ಗುಡ್ಡೆಯಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪೊಲೀಸರಿಗೆ ಶರಣಾಗಿದ್ದಾನೆ.
ರಫೀಕ್ (26) ಎಂಬಾತ ಕೊಲೆಯಾದ ಯುವಕನಾಗಿದ್ದಾನೆ. ಕಕ್ಯೆಪದವು ನಿವಾಸಿ ಸಿದ್ದೀಕ್ ಎಂಬಾತ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. ಆರೋಪಿ ಸಿದ್ಧಿಕ್ ಪುಂಜಾಲಕಟ್ಟೆ ಠಾಣೆಗೆ ಹಾಜರಾಗಿ ಪೊಲೀಸರಿಗೆ ಶರಣಾಗಿದ್ದಾನೆ. ಪುಂಜಾಲಕಟ್ಟೆ ಪೊಲೀಸರು ತನಿಖೆ ಮುನ್ನಡೆಸಿದ್ದಾರೆ.
ವೈಯಕ್ತಿಕ ದ್ವೇಷವೇ ಕೊಲೆಗೆ ಕಾರಣ ಎನ್ನಲಾಗಿದ್ದು, ಪುಂಜಾಲಕಟ್ಟೆ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.