ಮಂಗಳೂರು, ಸೆ. 14 (DaijiworldNews/SM): ಗಡಿ ಮೂಲಕ ಕೇರಳದಿಂದ ಜಿಲ್ಲೆಗೆ ಬರುವವವರ ಕೋವಿಡ್ ನೆಗೆಟಿನ್ ರಿಪೋರ್ಟ್ ಕಡ್ಡಾಯವಾಗಿ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಮತ್ತೊಮ್ಮೆ ಸೂಚಿಸಿದ್ದಾರೆ.
ತಮ್ಮ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಮಾತನಾಡಿದ ಅವರು, ಕೇರಳದಲ್ಲಿ ನಿಫಾ ಪತ್ತೆ ಹಾಗೂ ಕೊರೋನಾ ಹಿನ್ನೆಲೆಯಲ್ಲಿ ಈ ಸೂಚನೆ ನೀಡಿದ್ದಾರೆ. ಗಡಿಭಾಗದಲ್ಲಿ ಕಡ್ಡಾಯವಾಗಿ ಕೋವಿಡ್ ನೆಗಿಟಿವ್ ರಿಪೋರ್ಟ್ ತೆಗೆದುಕೊಳ್ಳ ಬೇಕು ಹಾಗೂ ಅವರನ್ನು 7 ದಿನ ಕ್ವಾರಂಟೈನ್ನಲ್ಲಿ ಇರಿಸಬೇಕು ಎಂದರು.