ವಿಟ್ಲ, ಸೆ. 14 (DaijiworldNews/SM): ಅಡ್ಯನಡ್ಕ ವಾರಣಾಸಿ ಫಾರ್ಮ್ಗೆ ಅತಿಥಿಯಾಗಿ ಬಂದ ಮಹಿಳೆಯೊಬ್ಬಳು ಸಾಹಸಕ್ರೀಡೆಗಳನ್ನು ಆಡುವ ಕೆರೆಗೆ ಬಿದ್ದು, ಗಂಭೀರ ಸ್ಥಿತಿಯಲ್ಲಿ ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಂಗಳೂರು ಮೂಲದ ವೈದ್ಯೆ ಗಂಭೀರ ಸ್ಥಿತಿಯಲ್ಲಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಎರಡು ದಿನಗಳ ಹಿಂದೆ ಫಾರ್ಮ್ ಗೆ ಆಗಮಿಸಿದ ಈಕೆ ಕೆರೆಯ ಸಮೀಪಕ್ಕೆ ಒಂಟಿಯಾಗಿ ಹೋಗಿದ್ದಾರೆನ್ನಲಾಗಿದೆ. ಬಳಿಕ ಹಲವು ಸಮಯವಾದರೂ ಬಾರದ ಸಂದರ್ಭ ಕೆರೆಯಲ್ಲಿ ಹುಡುಕಾಡಿದ್ದಾರೆ. ನೀರಿನಡಿಗೆ ಹೋಗಿದ್ದ ಈಕೆಯ ದೇಹವನ್ನು ಹೊರ ತೆಗೆದು ಆಸ್ಪತ್ರೆಗೆ ದಾಖಲಿಸಿದ್ದಾರೆ.
ವಿಟ್ಲ ಪೊಲೀಸ್ ನಿರೀಕ್ಷಕ ನಾಗರಾಜ್ ಎಚ್. ಇ. ಅವರ ತಂಡ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ದೂರು ಬಾರದ ಹಿನ್ನಲೆಯಲ್ಲಿ ಯಾವುದೇ ಪ್ರಕರಣ ದಾಖಲಿಸಿಕೊಂಡಿಲ್ಲ.
ಪ್ರವಾಸಿಗರನ್ನು ಆಕರ್ಷಿಸುವ ನಿಟ್ಟಿನಲ್ಲಿ ನಿರ್ಮಾಣವಾದ ಈ ಕೆರೆಯಲ್ಲಿ ಸಾಹಸ ಕ್ರೀಡೆಗಳನ್ನು ನಡೆಸಲಾಗುತ್ತದೆ. ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಈ ಭಾಗದಲ್ಲಿ ಬಂದು ಠಿಕ್ಕಾಣಿಯೂ ಹೂಡುತ್ತಿರುತ್ತಾರೆ. ಕೆಲವು ವರ್ಷಗಳ ಹಿಂದೆ ಬಾಲಕನೊಬ್ಬ ಇದೇ ಕೆರೆಯಲ್ಲಿ ಬಿದ್ದು ಮೃತಪಟ್ಟ ಘಟನೆ ನಡೆದಿತ್ತು.