ಸುಳ್ಯ, ಸೆ. 15 (DaijiworldNews/SM): ಬಟ್ಟೆ ಒಗೆಯಲೆಂದು ಹೊಳೆಗೆ ಹೋಗಿದ್ದ ಮಹಿಳೆಯ ಶವ ಕಲ್ಚೆರ್ಪೆ ಪಯಸ್ವಿನಿ ನದಿಯಲ್ಲಿ ಬುಧವಾರ ಪತ್ತೆಯಾಗಿದೆ. ಅರಂತೋಡು ಗ್ರಾಮದ ಸಣ್ಣಮನೆಯ ಮಾಧವರವರ ಪತ್ನಿ ಮೀನಾಕ್ಷಿ ಯವರು ಸೆ.11 ರಂದು ಸಂಜೆ ಅರಂತೋಡಿನ ಮಾಡದಕಾನ ಹೊಳೆಗೆ ಬಟ್ಟೆ ಒಗೆಯಲೆಂದು ಹೋದವರು ಮರಳಿ ಮನೆಗೆ ಬಂದಿರಲಿಲ್ಲ.
ಬಳಿಕ ರಾತ್ರಿಯಿಂದ ಅರಂತೋಡು ಗ್ರಾಮಸ್ಥರು ಹುಡುಕಿದರೂ ಮಹಿಳೆಯ ಸುಳಿವು ಪತ್ತೆಯಾಗಲಿಲ್ಲ.ಮರುದಿನ ಸುಳ್ಯ ಅಗ್ನಿಶಾಮಕದಳದವರು ಮತ್ತು ಊರವರು ಹುಡುಕಲು ಪ್ರಾರಂಭಿಸಿದರು ಸಂಜೆಯವರಗೆ ಮಹಿಳೆಯ ಶವ ಪತ್ತೆಯಾಗಲಿಲ್ಲ. ಶವ ಪತ್ತೆ ಕಾರ್ಯದಲ್ಲಿ ಪೈಚಾರ್ ಮುಳುಗು ತಜ್ಞರ ತಂಡ ಹಾಗೂ ಅಗ್ನಿಶಾಮಕ ದಳದವರು ಕಾರ್ಯಚರಣೆ ನಡೆಸಿದ್ದರು.