ಬೆಳ್ತಂಗಡಿ, ಸೆ 16(DaijiworldNews/MS): ಇಲ್ಲಿನ ವ್ಯಾಪ್ತಿಯ ಸಾಂತೋಮ್ ಟವರ್ ನಲ್ಲಿ ಕಾರ್ಯಾಚರಿಸುತ್ತಿದ್ದ ಬೆಳ್ತಂಗಡಿ ಸಿರಿಯನ್ ಕೆಥೋಲಿಕ್ ವಿವಿಧೋದ್ದೇಶ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜೋಸೆಫ್ ಸಿ. (56) ಅವರು ಸೆ. 15 ರಂದು ಕರ್ತವ್ಯದಲ್ಲಿದ್ದಾಗಲೇ ಕಚೇರಿಯಲೇ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ.
ಮಧ್ಯಾಹ್ನ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂದರ್ಭ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು ತತ್ಕ್ಷಣ ಸಮೀಪದ ಸ್ಪಂದನ ಕ್ಲಿನಿಕ್ ನ ವೈದ್ಯರು ಪರೀಕ್ಷಿಸಿ ಪ್ರಥಮ ಚಿಕಿತ್ಸೆ ನೀಡಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು.
ಬೆಳ್ತಂಗಡಿ ಧರ್ಮ ಪಾಂತ್ರದ ಜ್ಞಾನ ನಿಲಯದ ಧರ್ಮೋಪದೇಶ ಕೇಂದ್ರದಲ್ಲಿ 10 ವರ್ಷ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿ ಬಳಿಕ ಸಿರಿಯನ್ ಕೆಥೋಲಿಕ್ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ಮುಖ್ಯ ಕಾರ್ಯನಿರ್ವಹಣಾಧ್ಕಾರಿಯಾಗಿ ಕಳೆದ 11 ವರ್ಷಗಳಿಂದ ಕರ್ತವ್ಯದಲ್ಲಿದ್ದರು .
ಮೃತರು ಪತ್ನಿ ಇಬ್ಬರು ಪುತ್ರರನ್ನು ಅಗಲಿದ್ದಾರೆ.