ಕಾರ್ಕಳ, ಸೆ 17 (DaijiworldNews/MS): ಎರಡು ದಿನಗಳ ಹಿಂದೆ ನಾಪತ್ತೆಯಾಗಿರುವುದಾಗಿ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾದ ನಿಟ್ಟೆ ಗ್ರಾಮದ ಮಜಾಲು ಮನೆ ನಿವಾಸಿ ಶ್ಯಾಮ್ ಕೋಟ್ಯಾನ್ (65) ಅವರ ಶವ ಸೆ.16 ರ ಗುರುವಾರ ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ಮಧುರಪಟ್ಟದ ಬಳಿಯ ಸ್ವರ್ಣ ನದಿಯಲ್ಲಿ ಪತ್ತೆಯಾಗಿದೆ.
ದೂರು ದಾಖಲಿಸಿದ ಕೋಟ್ಯಾನ್ರ ಮಗಳು ಅಖಿಲಾ ಅಜೆಕಾರು ಶವಾಗಾರದಲ್ಲಿರಿಸಿದ ಮೃತದೇಹವನ್ನು ತನ್ನ ತಂದೆಯದೇ ಎಂದು ಗುರುತಿಸಿದ್ದಾರೆ ಎಂದು ತಿಳಿಸಿದ್ದಾರೆ.
ಸೆ.13ರ ಸೋಮವಾರ ಬೆಳಿಗ್ಗೆ ಮನೆಯಿಂದ ಹೋದವರು ಕಾಣೆಯಾಗಿದ್ದಾರೆ ಎಂದು ಅವರ ಮಗಳು ಅಖಿಲಾ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಸೆ.16 ಗುರುವಾರ ಅವರ ಮೃತದೇಹ ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ಮಧುರಪಟ್ಟಣ ಬಸದಿಯ ಬಳಿ ಸ್ವರ್ಣ ನದಿಯಲ್ಲಿ ಪತ್ತೆಯಾಗಿದೆ.
ಈ ಬಗ್ಗೆ ಅಜೆಕಾರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.