ಮಂಗಳೂರು, ಸೆ.19 (DaijiworldNews/PY): ದಕ್ಷಿಣ ಕನ್ನಡ ಗ್ಯಾರೇಜ್ ಮಾಲಕರ ಸಂಘ ರಿ. ಮಂಗಳೂರು ಮತ್ತು ಕಾರ್ಮಿಕ ಇಲಾಖೆ ಬೆಂಗಳೂರು ಮತ್ತು ದ.ಕ ಜಿಲ್ಲಾ ಸಾಮಾಜಿಕ ಭದ್ರತಾ ಮಂಡಳಿಯ ಸಹಭಾಗಿತ್ವದಲ್ಲಿ ಮೆಕ್ಯಾನಿಕ್ ವೃತ್ತಿ ಬಾಂಧವರಿಗೆ ಆಹಾರ ಧಾನ್ಯಗಳ ಕಿಟ್ ವಿತರಣಾ ಕಾರ್ಯಕ್ರಮ ಸೆಪ್ಟೆಂಬರ್ 19 ಭಾನುವಾರದಂದು ಸಂಘದ ಸಭಾಂಗಣದಲ್ಲಿ ಜರುಗಿತು.
ಕಾರ್ಯಕ್ರಮವನ್ನು ಮಂಗಳೂರು ಉಪವಿಭಾಗದ ಕಾರ್ಮಿಕ ಅಧಿಕಾರಿ ಅಮರೇಂದ್ರ ಅವರು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ದ.ಕ ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದ ಅಧ್ಯಕ್ಷ ದಿನೇಶ್ ಕುಮಾರ್, ಚೇರ್ಮನ್ ಜನಾರ್ದನ ಎ. ಅತ್ತಾವರ, ಮಂಗಳೂರಿನ ಮಾಸ್ಟರ್ ಕೀ ಸಂಸ್ಥೆಯ ವಿನ್ಸೆಂಟ್ ಜಿ. ಲೋಬೋ, ದಕ್ಷಿಣ ಕನ್ನಡ ಗ್ಯಾರೇಜ್ ಮಾಲಕರ ಸಂಘದ ಹಿರಿಯ ನಿರ್ದೇಶಕ ಪುಂಡಲೀಕ ಸುವರ್ಣ, ಉಪಾಧ್ಯಕ್ಷ ನಾರಾಯಣ್ ಮುಂತಾದವರ ಉಪಸ್ಥಿತಿಯಲ್ಲಿ ಮಂಗಳೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ (ಉಳ್ಳಾಲ) ಸುಮಾರು ಮುನ್ನೂರು ಮೆಕ್ಯಾನಿಕ್ ವೃತ್ತಿ ಬಾಂಧವರಿಗೆ ಆಹಾರ ಕಿಟ್ ವಿತರಿಸಲಾಯಿತು.
ಉಪಾಧ್ಯಕ್ಷ ಮಾಧವ ಬಂಗೇರ ಅತಿಥಿಗಳನ್ನು ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಕಮಿಲ ಕಾರ್ಯಕ್ರಮ ನಿರೂಪಣೆಗೈಯ್ದರು.