ಮಂಗಳೂರು, ಸೆ.19 (DaijiworldNews/PY): ವಿವಾದಾತ್ಮಕ ಹೇಳಿಕೆ ವಿಚಾರ ಹಿನ್ನೆಲೆ ಅಖಿಲ ಭಾರತೀಯ ಹಿಂದೂ ಮಹಾಸಭಾ ರಾಜ್ಯ ಪ್ರಧಾನ ಕಾರ್ಯದರ್ಶಿಧಮೇಂದ್ರ ಕ್ಷಮೆಯಾಚಿಸಿದ್ದಾರೆ.
"ಸುದ್ದಿಗೋಷ್ಠಿಯಲ್ಲಿ ಗಾಂಧೀಜಿ ಅವರ ಹಿಂದುತ್ವದ ವಿರೋಧ ನೀತಿ ಬಗ್ಗೆ ನಾನು ಮಾತನಾಡಿದ್ದೇನೆ. ನಾನು ಯಾರಿಗೂ ಕೂಡಾ ಬೆದರಿಕೆ ಹಾಕಿಲ್ಲ" ಎಂದಿದ್ದಾರೆ.
"ನನ್ನ ಹೇಳಿಕೆಯಲ್ಲಿ ಹತ್ಯೆ ಎಂಬ ಶಬ್ದವು ಅಸಂವಿಧಾನಿಕವಾಗಿದ್ದರೆ ಆ ವಿಚಾರವಾಗಿ ನಾನು ಕ್ಷಮೆ ಕೇಳುತ್ತೇನೆ. ಧರ್ಮದ ರಕ್ಷಣೆಗೆ ಹಿಂದೂ ಮಹಾಸಭಾ ಯಾವಾಗಲೂ ನಿಲ್ಲುತ್ತದೆ ಎಂಬುದು ನನ್ನ ಮಾತಿನ ಅರ್ಥ" ಎಂದು ಹೇಳಿದ್ದಾರೆ.
"ನಾವು ಗಾಂಧಿಯನ್ನೇ ಬಿಟ್ಟಿಲ್ಲ ಗಾಂಧಿಯನ್ನೇ ಹತ್ಯೆ ಮಾಡಿದ್ದೇವೆ. ಹಿಂದೂಗಳ ಮೇಲೆ ದಾಳಿ ಆದಾಗ ಗಾಂಧಿಯನ್ನೇ ಬಿಟ್ಟಿಲ್ಲ. ಇನ್ನು ನಿಮ್ಮನ್ನು ಬಿಡುತ್ತೇವಾ?. ಬಿಜೆಪಿ ಒಂದು ಬೆನ್ನುಮೂಳೆ ಇಲ್ಲದ ಸರ್ಕಾರ. ಇವರಿಗಿಂತ ತಾಲಿಬಾನ್ಗಳು ವಾಸಿ. ಇವರ ಸರ್ಕಾರ ತಾಲಿಬಾನ್ಗಳಿಗಿಂತ ಕೀಳು" ಎಂದಿದ್ದರು.
"ಇಲ್ಲಿ ಸಂಸದರು ಶಾಸಕರು ಬಾಲಿಷ ಉತ್ತರ ನೀಡುತ್ತಾರೆ. ಇಲ್ಲಿ ಬಿಜೆಪಿ ಅಲ್ಪಸಂಖ್ಯಾತರ ಮತ ಓಲೈಕೆಗೆ ಮುಂದಾಗಿದೆ. ದೇವಾಲಯ ಧ್ವಂಸದ ಮೂಲಕ ಅಲ್ಪಸಂಖ್ಯಾ ಮತ ಗಳಿಕೆಗೆ ಮುಂದಾಗಿದೆ. ಇವರ ವಿರುದ್ದ ಹಿಂದೂ ಮಹಾ ಸಭಾ ಮುಂದಿನ ಚುನಾವಣೆವರೆಗೆ ಹೋರಾಟ ಮಾಡುತ್ತೆ" ಎಂದು ಹೇಳಿದ್ದರು.