ಕಾಸರಗೋಡು, ಸೆ. 19 (DaijiworldNews/HR): ಎಂಟನೇ ತರಗತಿಯ ವಿದ್ಯಾರ್ಥಿನಿಯ ಆತ್ಮಹತ್ಯೆಗೆ ಸಂಬಂಧಪಟ್ಟಂತೆ ಅಧ್ಯಾಪಕನನ್ನು ಪೊಲೀಸರು ಬಂಧಿಸಿದ್ದಾರೆ.
ಮೇಲ್ಪರಂಬದ ಖಾಸಗಿ ಶಾಲೆಯ ಅಧ್ಯಾಪಕ ಎ.ಉಸ್ಮಾನ್ (25) ಬಂಧಿತ ಅರೋಪಿ.
ಇದೇ ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿನಿಯ ಅತಹತ್ಯೆಗೆ ಸಂಬಂಧಪಟ್ಟಂತೆ ಈತನನ್ನು ಬಂಧಿಸಲಾಗಿದ್ದು, ಸೆ. 8ರಂದು ಮನೆಯಲ್ಲಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ ಮಾಡಿ ಕೊಂಡಿದ್ದಳು. ಅಧ್ಯಾಪಕನ ವಿರುದ್ಧ ಪೋಕ್ಸೋ, ಆತ್ಮಹತ್ಯೆ ಗೆ ಪ್ರೇರಣೆ ಮೊದಲಾದ ಪ್ರಕರಣಗಳನ್ನು ದಾಖಲಿಸಲಾಗಿದೆ.
ಘಟನೆ ಬಳಿಕ ತಲೆ ಮರೆಸಿಕೊಂಡಿದ್ದ ಈತನನ್ನು ವಿಶೇಷ ಪೊಲೀಸ್ ತಂಡ ಮುಂಬೈಯಿಂದ ಬಂಧಿಸಿದೆ.
ಈತನ ಮೊಬೈಲ್ ಕೇಂದ್ರೀಕರಿಸಿ ಪೊಲೀಸರು ತನಿಖೆ ನಡೆಸಿದಾಗ ಮುಂಬೈಯಲ್ಲಿರುವ ಬಗ್ಗೆ ಮಾಹಿತಿ ಲಭಿಸಿದ್ದು, ಇದರಂತೆ ಆರೋಪಿಯನ್ನು ಬಂಧಿಸಲಾಗಿದೆ.
ಮೊಬೈಲ್ ಸಂದೇಶಗಳು ಸಾಮಾಜಿಕ ಜಾಲ ತಾಣಗಳ ಮೂಲಕ ಬೇರೆಯವರಿಗೆ ಲಭಿಸಿದ್ದರಿಂದ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವುದಾಗಿ ಪೊಲೀಸ್ ವರದಿಯಲ್ಲಿ ತಿಳಿಸಿದೆ.
ಆದೂರು ನಿವಾಸಿಯಾಗಿರುವ ಈ ಅಧ್ಯಾಪಕ ವಿದ್ಯಾರ್ಥಿನಿಯೊಂದಿಗೆ ಸಾಮಾಜಿಕ ಜಾಲ ತಾಣಗಳಲ್ಲೂ ಶಬ್ದ ಸಂದೇಶಗಳನ್ನು ರವಾನಿಸಲಾಗಿತ್ತು ಎಂದು ಪೋಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿತ್ತು. ಆದರೆ ಈತನ ಶೋಷಣೆಯಿಂದ ವಿದ್ಯಾರ್ಥಿ ಮಾನಸಿಕವಾಗಿ ಕುಗ್ಗಿದ್ದಳು ಎಂದು ಪೊಲೀಸರಿಗೆ ಮಾಹಿತಿ ಲಭಿಸಿತ್ತು. ಆಪ್ರಾಪ್ತ ಬಾಲಕಿಗೆ ಮಾನಸಿಕ ಕಿರುಕುಳ ನೀಡಿದ್ದಾಗಿ ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿತ್ತು.
ಈಕೆ ಬಳಸುತ್ತಿದ್ದ ಮೊಬೈಲ್ ನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ಮಾಹಿತಿ ಕಲೆ ಹಾಕಿದ್ದರು. ಈತನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿ ಹೆಚ್ಚಿನ ತನಿಖೆಗೆ ಕಸ್ಟಡಿಗೆ ಪಡೆಯಲಾಗುವುದು ಎಂದು ಮೇಲ್ಪರಂಬ ಠಾಣಾ ಪೊಲೀಸರು ತಿಳಿಸಿದ್ದಾರೆ.