ಕಾರ್ಕಳ, ಸೆ. 19 (DaijiworldNews/SM): ಶಿರ್ಲಾಲಿನಲ್ಲಿ ಗೋ ಕಳ್ಳತನದ ವಿರುದ್ಧ ಬೃಹತ್ ಪ್ರತಿಭಟನಾ ಸಭೆಯ ಗಂಟೆಯ ಅಂತರದಲ್ಲಿಯೇ ಹಿಂದೂ ಸಂಘಟನೆಯ ಕಾರ್ಯಕರ್ತರು ಮಾರುತಿ ಕಾರಿನಲ್ಲಿ ಕದ್ದೊಯ್ಯುವ ಎರಡು ಗೋವುಗಳನ್ನು ರಕ್ಷಿಸಿದ್ದಾರೆ.
ಹಿಂದೂ ಜಾಗರಣ ವೇದಿಕೆಯಾ ಕಾರ್ಯಕರ್ತರು ನಡೆಸಿ ಗೋವುಗಳನ್ನು ರಕ್ಷಿಸಿದ್ದಾರೆ. ಕಾರಿನಲ್ಲಿದ್ದವರು ಪರಾರಿಯಾಗಿದ್ದಾರೆ.
ಶಿರ್ಲಾಲಿನಿಂದ ಸುಮಾರು 7.00 ಗಂಟೆಗೆ ಮಾರುತಿ ಕಾರನ್ನು ಸಂಘಟನೆಯ ಕಾರ್ಯಕರ್ತರು ಬೆನ್ನಟ್ಟಿದ್ದು, ಕಾರು ಕೆರ್ವಾಶೆಯ ಕಡೆಗೆ ಹೋಗುತ್ತಿತ್ತು ಎನ್ನಲಾಗಿದೆ. ಅಲ್ಲದೆ ಮಸೀದಿ ಬಳಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದ್ದು ಕಾರಿನಲ್ಲಿದ್ದವರು ಪರಾರಿಯಾಗಿದ್ದರೆಂದು ತಿಳಿದು ಬಂದಿದೆ. ಸ್ಥಳಕ್ಕೆ ಸಂಘಟನೆಯ ಕಾರ್ಯಕರ್ತರು ದೌಡಾಯಿಸಿದ್ದು ಬಿಗುವಿನ ವಾತಾವರಣ ಉಂಟಾಗಿತ್ತು.