ಉಳ್ಳಾಲ, ಸೆ 20 (DaijiworldNews/MS): ಧಿಡೀರ್ ಆಗಿ ರಸ್ತೆಗೆ ಬಂದ ಬಾಲಕನೋರ್ವ ಕಾರಿನಡಿಗೆ ಬಿದ್ದ ಪವಾಡಸದೃಶವಾಗಿ ಗಾಯಗಳೊಂದಿಗೆ ಪಾರಾದ ಘಟನೆ ಬಂಟ್ವಾಳದ ಇರಾ ಬಳಿ ನಡೆದಿದೆ.
ಘಟನೆ ಕುರಿತ ವೀಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ
ಇರಾ ಸೈಟ್ ಬಸ್ ಸ್ಟಾಪ್ ಸಮೀಪ ಮೈಸೂರು ಮೂಲಕ ಶಿವಾನಂದ್ ಎಂಬವರ ಪುತ್ರ ಮನೋಜ್ (12) ಗಾಯಾಳು ಬಾಲಕ. ಆಟವಾಡಲೆಂದು ಮನೆಯಿಂದ ಹೊರ ಓಡಿಬಂದ ಬಾಲಕ ಏಕಾಏಕಿ ರಸ್ತೆ ದಾಟಲು ಮುಂದಾಗಿದ್ದಾನೆ. ಪರಿಣಾಮ ಕಾರು ಆತನ ಮೇಲೆ ಹರಿದಿದೆ. ಕಾರಿನಡಿಗೆ ಬಾಲಕ ಬಿದ್ದು ಎಡಕಾಲು ಮುರಿತಕ್ಕೊಳಗಾಗಿದ್ದು, ಪ್ರಾಣಾಪಾಯದಿಂದ ಪವಾಡಸದೃಶವಾಗಿ ಪಾರಾಗಿದ್ದಾರೆ.