ಕಾರ್ಕಳ, ಸೆ.25 (DaijiworldNews/HR): ಯೋಗ, ಧ್ಯಾನ ಮಾನವನ ದೈಹಿಕ ಹಾಗೂ ಮಾನಸಿಕ ಸದೃಢವನ್ನು ಹೆಚ್ಚಿಸುತ್ತಿದೆ. ದಕ್ಷ ಮತ್ತು ಆರೋಗ್ಯಕರ ದೇಶ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿಯವರ ಕರೆಯಂತೆ ಭಾರತೀಯ ಯುವಜನರು ಕನಿಷ್ಟ ಅರ್ಧ ಘಂಟೆಯಾದರೂ ಇಂತಹ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕೆಂದು ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ, ವಿ. ಸುನಿಲ್ ಕುಮಾರ್ ಹೇಳಿದರು.
ಭಾರತ ಸರ್ಕಾರ, ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ ನೆಹರು ಯುವ ಕೇಂದ್ರ ಉಡುಪಿ, ಮತ್ತು ಶ್ರೀ ಭುವನೇಂದ್ರ ಕಾಲೇಜು ಜಂಟಿ ಆಶ್ರಯದೊಂದಿಗೆ ಸ್ವಾತಂತ್ರ್ಯ ಅಮೃತಮಹೋತ್ಸವದ ಪ್ರಯುಕ್ತ ಅನಂತಶಯನ ರಸ್ತೆಯಲ್ಲಿ ಫಿಟ್ ಇಂಡಿಯಾ ಫ್ರೀಡಂ ರನ್-2.0 ಪ್ರತಿಜ್ಞಾ ವಿಧಿ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.
ಜ್ಞಾನಸುಧಾ ಕಾಲೇಜು ಪ್ರಾಂಶುಪಾಲ ದಿನೇಶ್.ಎಂ ಕೊಡವೂರು, ಶ್ರೀ ಭುವನೇಂದ್ರ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ, ನ್ಯಾಷನಲ್ ಕೆಡೆಕ್ ಕಾಪ್ಸ್, ರೋವರ್ಸ್- ರೇಂಜರ್ಸ್ , ರೆಡ್ ಕ್ರಾಸ್ ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಸಾಣೂರು ಯುವಕ ಮಂಡಲದ ಸದಸ್ಯರು ಉಪಸ್ಥಿತರಿದ್ದರು.