ಕಾರ್ಕಳ, ಸೆ.25 (DaijiworldNews/HR): ಸ್ಕೀಂ ನೌಕರರ ಅಖಿಲ ಭಾರತ ಮುಷ್ಕರದ ಭಾಗವಾಗಿ ಕಾರ್ಕಳದಲ್ಲಿ ಸಿಐಟಿಯು ಅಕ್ಷರ ದಾಸೋಹ ನೌಕರರು ಬಂಡಿಮಠ ಬಸ್ ನಿಲ್ದಾಣದಿಂದ ಮೆರವಣಿಗೆ ನಡೆಸಿದ್ದಾರೆ.
ಇದೇ ಸಂದರ್ಭದಲ್ಲಿ ತಹಶೀಲ್ದಾರ್ ಪ್ರಕಾಶ್ ಮರವಳ್ಳಿ ಅವರ ಮುಖಾಂತರ ಪ್ರಧಾನ ಮಂತ್ರಿ ಹಾಗೂ ಮುಖ್ಯಮಂತ್ರಿ ಯವರಿಗೆ ಮನವಿ ನೀಡಲಾಯಿತು.
ಪ್ರತಿಭಟನೆಯಲ್ಲಿ ಸಿಐಟಿಯು ಉಡುಪಿ ಜಿಲ್ಲಾ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಕಾರ್ಕಳ ತಾಲೂಕು ಬೀಡಿ ಕಾರ್ಮಿಕರ ಸಂಘ ದ ಅಧ್ಯಕ್ಷೆ ಸುನೀತಾ ಶೆಟ್ಟಿ, ಅಕ್ಷರ ದಾಸೋಹ ಕಾರ್ಕಳ ತಾಲೂಕು ಸಮಿತಿಯ ಅಧ್ಯಕ್ಷೆ ಬೇಬಿ ಭಂಡಾರಿ, ಕಾರ್ಯದರ್ಶಿ ಜ್ಯೋತಿ,, ಜಯಶ್ರೀ, ಸುಮತಿ ಹೆಗ್ಡೆ ಮತ್ತಿತ್ತರರು ಉಪಸ್ಥಿತರಿದ್ದರು.