ಕಾಸರಗೋಡು, ಸೆ 27(DaijiworldNews/MS): ಕೇಂದ್ರ ಸರಕಾರದ ನೂತನ ಕೃಷಿ ಕಾಯ್ದೆ ಹಾಗೂ ಜನವಿರೋಧಿ ನೀತಿಗಳನ್ನು ಪ್ರತಿಭಟಿಸಿ ಕರೆ ನೀಡಿರುವ ಭಾರತ್ ಬಂದ್ ಕಾಸರಗೋಡು ಜಿಲ್ಲೆಯಲ್ಲಿ ಉತ್ತಮ ಸ್ಪಂದನೆ ದೊರಕ್ಕಿದ್ದು, ಬಸ್ಸು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ . ಆಟೋ - ಟ್ಯಾಕ್ಷಿ ಚಾಲಕರು ಮುಷ್ಕರದಲ್ಲಿ ಪಾಲ್ಗೊಂಡಿದ್ದಾರೆ.
ಅಂಗಡಿ ಮುಂಗಟ್ಟುಗಳು ಸಂಪೂರ್ಣವಾಗಿ ಮುಚ್ಚಿವೆ. ಕೆ ಎಸ್ ಆರ್ ಟಿ ಸಿ , ಖಾಸಗಿ ಬಸ್ಸುಗಳು ಸಂಚಾರ ನಡೆಸುತ್ತಿಲ್ಲ. ಸರಕಾರಿ ಕಚೇರಿಗಳಲ್ಲಿ ಹಾಜರಾತಿ ವಿರಳವಾಗಿದೆ.ಆಡಳಿತ ಪಕ್ಷವಾದ ಎಲ್ ಡಿ ಎಫ್ ಹಾಗೂ ಪ್ರತಿಪಕ್ಷವಾದ ಯು ಡಿ ಎಫ್ ಬಂದ್ ಗೆ ಬೆಂಬಲ ಸೂಚಿಸಿದ್ದು , ಇದಲ್ಲದೆ ಕಾರ್ಮಿಕ ಸಂಘಟನೆಗಳು ಮುಷ್ಕರದಲ್ಲಿ ಭಾಗಿಯಾಗಿರುವುದರಿಂದ ಬಂದ್ ಸಂಪೂರ್ಣ ಯಶಸ್ವಿಯಾಗಿದೆ. ಕೆಲವೇ ಕೆಲ ಖಾಸಗಿ ವಾಹನಗಳು ಮಾತ್ರ ರಸ್ತೆಗಿಳಿದಿವೆ. ನಗರ ಮಾತ್ರವಲ್ಲ ಗ್ರಾಮೀಣ ಪ್ರದೇಶಗಳಲ್ಲೂ ಬಂದ್ ಯಶಸ್ವಿಯಾಗಿದೆ.
ವಿವಿಧ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ಕಾಸರಗೋಡು ನಗರದಲ್ಲಿ ಪ್ರತಿಭಟನೆಗಳು ನಡೆದವು.