ಕೋಟ, ಸೆ 27(DaijiworldNews/MS): ಈಜಲು ತೆರಳಿದ್ದ ವಿದ್ಯಾರ್ಥಿಯೋರ್ವ ನದಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಮಂದಾರ್ತಿ ಸಮೀಪ ನಂಚಾರಿನಲ್ಲಿ ಸೆ. 26ರ ಭಾನುವಾರ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಕೇರಳ ಮೂಲದ ನಿವಾಸಿ , ಮಧುವನ ಸಮೀಪದ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ಎರಡನೇ ವರ್ಷದ ನರ್ಸಿಂಗ್ ಅಭ್ಯಾಸಿಸುತ್ತಿದ್ದ ವಿದ್ಯಾರ್ಥಿ ಜಿಬಿನ್ ಸಾಮ್ (20) ಎಂದು ಗುರುತಿಸಲಾಗಿದೆ.
ಭಾನುವಾರ ಅಮುಲ್ ಬಿಜಿ ಎಂಬವರ ಮನೆಗೆ ಜಿಬಿನ್ ಸಾಮ್ ಸೇರಿ ಮೂವರು ಸ್ನೇಹಿತರು ಬಂದಿದ್ದರು. ಸ್ನೇಹಿತರ ಜೊತೆಯಲ್ಲಿ ನಂಚಾರು ಸಮೀಪದ ಸೀತಾ ನದಿಗೆ ಈಜಲು ತೆರಳಿದ್ದರು. ಈ ವೇಳೆ ನೀರಲ್ಲಿ ಮುಳುಗಿ ತೀವ್ರ ಅಸ್ವಸ್ಥಗೊಂಡಿದ್ದ ಸ್ಥಳೀಯರು ತಕ್ಷಣ ರಕ್ಷಿಸಿ ಬ್ರಹ್ಮಾವರದ ಸರಕಾರಿ ಆಸ್ಪತ್ರೆಗೆ ಕರೆದೊಯ್ಯಿದಿದ್ದರು. ಆದರೆ ಅದಾಗಲೇ ಜಿಬಿನ್ ಮೃತಪಟ್ಟಿದ್ದ.
ಕೋಟ ಪೊಲೀಸರು ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.