ಕಾರ್ಕಳ, ಸೆ.27 (DaijiworldNews/HR): ಕೇಂದ್ರ ಸರಕಾರ ಕೃಷಿ ಕಾಯಿದೆ ತಿದ್ದುಪಡಿ ಮಸೂದೆ ಜಾರಿಯ ಮೂಲಕ ದೇಶದ ಬೆನ್ನೆಲೆಬಾಗಿರುವ ರೈತರ ಬೆನ್ನುಮೂಳೆ ಮುರಿದು ಅವರನ್ನು ಬಂಡವಾಳ ಶಾಹಿಗಳ ಗುಲಾಮರನ್ನಾಗಿಸುವ ವ್ಯವಸ್ಥಿತ ಹುನ್ನಾರ ನಡೆಸುತ್ತಿದೆ ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ ಚಂದ್ರಪಾಲ್ ನಕ್ರೆ ಹೇಳಿದ್ದಾರೆ.
ಬೈಪಾಸ್ ಸರ್ಕಲ್ನಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕ ಆಯೋಜಿಸಿದ್ದ ಕೇಂದ್ರದ ಕೃಷಿ ತಿದ್ದುಪಡಿ ಮಸೂದೆಯನ್ನು ಪ್ರತಿರೋದಿಸಿ ನಡೆದ ಸಾಂಕೇತಿಕ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, "ಸ್ವಾಮಿನಾಥನ್ ಆಯೋಗದ ಶಿಪಾರಸುಗಳನ್ನು ಗಾಳಿಗೆ ತೂರಿ ಕನಿಷ್ಟ ಬೆಂಬಲ ಬೆಲೆ ಘೋಷಿಸುವಲ್ಲಿ ರೈತರನ್ನು ಕತ್ತಲೆಯಲ್ಲಿಡಲಾಗಿದೆ. ಭೂ ಮಸೂದೆ ತಿದ್ದುಪಡಿಯ ಮೂಲಕ ಮತ್ತೊಮ್ಮೆ ಈ ದೇಶದಲ್ಲಿ ಊಳಿಗಮಾನ್ಯ ಪದ್ಧತಿ ಜರಿಗೆ ಬರುವಂತೆ ಮಾಡಿದೆ" ಎಂದರು.
ರಾಜ್ಯ ಕಿಸಾನ್ ಘಟಕ ಕಾರ್ಯದರ್ಶಿ ಉದಯಕುಮಾರ್ ಶೆಟ್ಟಿ, ಸುಶಾಂತ್ ಸುಧಾಕರ್ ಸಂದರ್ಭೋಚಿತವಾಗಿ ಮಾತಾಡಿದರು.
ಜಿಲ್ಲಾ ಕಾಂಗ್ರಸ್ ಉಪಾಧ್ಯಕ್ಷ ಸುದಾಕರ ಕೋಟ್ಯಾನ್, ಕಾರ್ಕಳ ಬ್ಲಾಕ್ ಅಧ್ಯಕ್ಷ ಸದಾಶಿವ ದೇವಾಡಿಗ, ಕೆಪಿಸಿಸಿ ಕೋ ಓರ್ಡಿನೇಟರ್ ಕೃಷ್ಣಮೂರ್ತಿ, ಮಹಿಳಾ ಕಾಂಗ್ರೆಸ್ ಅದ್ಯಕ್ಷೆ ಅನಿತಾ ಡಿಸೋಜ, ಜಿಲ್ಲಾ ಕಾಂಗ್ರೆಸ್ ಕಿಸಾನ್ ಘಟಕ ಕಾರ್ಯಾದಕ್ಷ ಪ್ರಕಾಶ ಪೂಜಾರಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ಮಾಲಿನಿ ರೈ, ಮಾಜಿ ಪುರಸಬಾ ಅಧ್ಯಕ್ಷ ಸುಬೀತ್ ಕುಮಾರ್, ಪ್ರತಿಮಾ ರಾಣೆ, ಪಂಚಾಯತ್ ಸದಸ್ಯೆ ಮಮತಾ ಶೆಟ್ಟಿ. ಪುರಸಬಾ ವಿರೋಧ ಪಕ್ಷದ ನಾಯಕ ಅಶ್ಪಕ್ ಅಹಮ್ಮದ್, ಐಟಿ ಸತೀಶ್, ಬ್ಲಾಕ್ ಕಾನೂನು ಘಟಕದ ರೆಹಮತುಲ್ಲ, ಎಸ್ಸಿ ಘಟಕದ ಅಧ್ಯಕ್ಷ ಅಣ್ಣಪ್ಪ, ಗ್ರಾಮೀಣ ಅದ್ಯಕ್ಷ ಥೋಮಸ್ ಮಸ್ಕರೆನಸ್, ವಿವೇಕಾನಂದ ಶೆಣೈ, ಸುಂದರ ಗೌಡ ಹಾಗೂ ವಿವಿಧ ಘಟಕಗಳ ಸದಸ್ಯರು ಉಪಸ್ಥಿತರಿದ್ದರು.