ಕಾಸರಗೋಡು, ಸೆ.27 (DaijiworldNews/HR): ಕಾಲೇಜು ವಿದ್ಯಾರ್ಥಿನಿಯೋರ್ವಳ ಆತ್ಮಹತ್ಯೆಗೆ ಸಂಬಂಧಪಟ್ಟಂತೆ ಬಿಜಾಪುರ ಮೂಲದ ಯುವಕನೋರ್ವನನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಬಿಜಾಪುರದ ವಿಶಾಲ್ ರಾಥೋಡ್ (22) ಎಂದು ಗುರುತಿಸಲಾಗಿದೆ.
ಕುಂಬಳೆಯ ಸ್ನೇಹಾ ಎಂಬ ವಿದ್ಯಾರ್ಥಿನಿಯ ಆತ್ಮಹತ್ಯೆಗೆ ಸಂಬಂಧಪಟ್ಟಂತೆ ಈತನನ್ನು ಬಂಧಿಸಲಾಗಿದೆ.
ಸ್ನೇಹಾ ಮಂಗಳೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದು, ಸೆ. 17ರಂದು ಸಂಜೆ ಕಾಲೇಜಿನಿಂದ ಮನೆಗೆ ಬಂದಿದ್ದ ಸ್ನೇಹಾ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಳು. ಮನೆಯಿಂದ ಲಭಿಸಿದ್ದ ಪತ್ರದಲ್ಲಿ ಇಬ್ಬರ ಮೊಬೈಲ್ ನಂಬ್ರ ಹಾಗೂ ಹೆಸರು ಬರೆದಿಡಲಾಗಿತ್ತು. ಇದನ್ನು ಕೇಂದ್ರೀಕರಿಸಿ ತನಿಖೆ ನಡೆಸಿದ ಕುಂಬಳೆ ಠಾಣಾ ಪೊಲೀಸರು ಇಬ್ಬರನ್ನು ವಶಕ್ಕೆ ತೆಗೆದುಕೊಂಡಿದ್ದು ವಿಶಾಲ್ ನನ್ನು ಬಂಧಿಸಿದ್ದಾರೆ.
ವಿದ್ಯಾರ್ಥಿನಿಯ ಸಹಪಾಠಿ ಎನ್ನಲಾದ ಇನ್ನೋರ್ವನನ್ನು ವಿಚಾರಣೆ ನಡೆಸಿ ಬಿಡುಗಡೆ ಗೊಳಿಸಿದ್ದಾರೆ. ವಿಶಾಲ್ ಅಲ್ಯೂ ಮಿನಿಯಂ ಫಾಬ್ರಿಕೇಷನ್ ಕೆಲಸ ನಿರ್ವಹಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.">