ಕಾರ್ಕಳ, ಸೆ.29 (DaijiworldNews/PY): ಬಜಗೋಳಿ ಸುಂದರ ಪೂಜಾರಿ (63) ಅವರು ಕಾರ್ಕಳದ ಹಿರಿಯಂಗಡಿ ಶಿವತಿಕೆರೆಯ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಸಂಯುಕ್ತ ಕರ್ನಾಟಕ ಪತ್ರಿಕೆಯಲ್ಲಿ ಬಜಗೋಳಿಯ ವರದಿಗಾರರಾಗಿ ಸೇವೆ ಸಲ್ಲಿಸಿದ್ದ ಅವರು ನಂತರದ ದಿನದಲ್ಲಿ ಆರೋಗ್ಯ ಇಲಾಖೆಯ ಸೇರ್ಪಡೆಗೊಂಡಿದ್ದರು. ಮಾರ್ಪಾಡಿ ವೀರಪ್ಪ ಮೊಯ್ಲಿ ಅವರು ಕಾರ್ಕಳದ ಶಾಸಕ ಹಾಗೂ ಕರ್ನಾಟಕದ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಅವರ ಆಪ್ತ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿದ್ದರು. ಹೆಚ್.ಗೋಪಾಲ ಭಂಡಾರಿಯವರು ಶಾಸಕರಾಗಿದ್ದ ಅವಧಿಯಲ್ಲೂ ಅವರು ಆಪ್ತ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿದ್ದರು.
ಕಾರ್ಕಳ ಪುರಸಭೆಯಲ್ಲಿ ಆರೋಗ್ಯ ಪರಿವೀಕ್ಷಕರಾಗಿ ಹಲವು ವರ್ಷ ಕರ್ತವ್ಯ ನಿರ್ವಹಿಸಿದ್ದರು. ಇರ್ವತ್ತೂರು ಪ್ರಾರ್ಥಮಿಕ ಆರೋಗ್ಯ ಕೇಂದ್ರದಲ್ಲಿ ಆರೋಗ್ಯ ಪರಿವೀಕ್ಷಕರಾಗಿ ನಿವೃತ್ತಿ ಹೊಂದಿದ್ದರು.
ಬಜಗೋಳಿ ಬಿಲ್ಲವ ಸಂಘದ ಸ್ಥಾಪಕ ಅಧ್ಯಕ್ಷರಾಗಿ, ಸಮಾಜದ ಶ್ರೇಯಾಭಿವೃದ್ಧಿಗೆ ಶ್ರಮಿಸಿದ್ದರು.
ಮೃತರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ.