ಬೆಳ್ತಂಗಡಿ, ಅ 01 (DaijiworldNews/MS): ಸವಣಾಲುವಿನ ಕಾಡುಪ್ರದೇಶವೊಂದರಲ್ಲಿ 10 ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆಸಿ ಆಕೆಯನ್ಬು ಗರ್ಭಿಣಿಯಾಗಿಸಿದ ಪ್ರಕರಣಕ್ಕೆ ಸಂಬಂಧಿಸಿ ಬಾಲಕಿ ದೂರಿನ ಮೇರೆಗೆ ಇಬ್ಬರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನುಜೆಸಿಬಿ ಚಾಲಕನಾಗಿದ್ದ ಕಾರ್ಕಳ ತಾಲೂಕಿನ ರವೀಂದ್ರ ಹಾಗೂ ಬೆಳ್ತಂಗಡಿ ತಾಲೂಕಿನ ಕೊಕ್ರಾಡಿ ನಿವಾಸಿ ಯೋಗೀಶ ಎಂದು ತಿಳಿದುಬಂದಿದೆ. ಇವರಿಬ್ಬರು ಹತ್ತನೇ ತರಗತಿಯ ವಿಧ್ಯಾರ್ಥಿನಿಯಾಗಿರುವ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಆಕೆಯನ್ನು ಗರ್ಭಿಣಿಯಾಗಿಸಿದ್ದರು. ಈ ವಿಚಾರವನ್ನು ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದರು. ಲೌಕ್ ಡೌನ್ ಬಳಿಕ ಶಾಲೆಗೆ ತೆರಳಿದ ವೇಳೆ ಲಸಿಕೆ ನೀಡುವ ಸಲುವಾಗಿ ವೈದ್ಯರು ಪರೀಕ್ಷಿಸಿದಾಗ ಅನುಮಾನಗೊಂಡ ವೈದ್ಯರು ಆಸ್ಪತ್ರೆಯಲ್ಲಿ ಪರೀಕ್ಷೆ ನಡೆಸುವಂತೆ ಸೂಚಿಸಿದ್ದರು. ಪರೀಕ್ಷೆ ನಡೆಸಿರುವಾಗ ಆಕೆ ಗರ್ಭಿಣಿಯಾಗಿರುವುದು ವೈದ್ಯರು ದೃಢಪಡಿಸಿದ್ದರು. ಬಳಿಕ ಮನೆಯವರಿಗ ಮಾಹಿತಿ ನೀಡಿ ಆಕೆ ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಇದೀಗ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ