ಬಂಟ್ವಾಳ, ಅ.02 (DaijiworldNews/PY): ಜೆಸಿಐ ಬಂಟ್ವಾಳ, ರೋಟರಿ ಕ್ಲಬ್ ಬಂಟ್ವಾಳ ಟೌನ್, ಕರ್ನಾಟಕ ರಾಜ್ಯ ಟೈರ್ಸ್ ಅಸೋಸಿಯೇಷನ್ ಇದರ ಬಂಟ್ವಾಳ ಕ್ಷೇತ್ರ ಸಮಿತಿ, ಸೆಲ್ಕೋ ಸೋಲಾರ್ ಹಾಗೂ ಸಜೀಪಮೂಡ ಸರಕಾರಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳ ಜಂಟಿ ಸಹಯೋಗದಲ್ಲಿ ಗಾಂಧಿ ಜಯಂತಿ ಆಚರಣೆ ಹಾಗೂ ಶಾಲಾ ಪರಿಸರ ಸ್ವಚ್ಛತೆ ಶನಿವಾರ ಸರಕಾರಿ ಪ್ರೌಢಶಾಲೆ ಸಜಿಪಮೂಡದಲ್ಲಿ ನಡೆಯಿತು.
ಮುಖ್ಯ ಅತಿಥಿಗಳಾಗಿ ಜೆಸಿಐ ಬಂಟ್ವಾಳದ ಅಧ್ಯಕ್ಷ ಉಮೇಶ್ ಆರ್. ಮೂಲ್ಯ, ಜೆಸಿರೆಟ್ ಅಧ್ಯಕ್ಷೆ ವಿದ್ಯಾ ಉಮೇಶ್, ರೋಟರಿ ಕ್ಲಬ್ ಬಂಟ್ವಾಳ ಟೌನ್ ಅಧ್ಯಕ್ಷ ಶನ್ಫತ್ ಶರೀಫ್, ಕಾರ್ಯದರ್ಶಿ ಚಿತ್ತರಂಜನ್ ಶೆಟ್ಟಿ, ಟೈರ್ಸ್ ಅಸೋಸಿಯೇಷನ್ ಅಧ್ಯಕ್ಷ ನಾಗೇಶ್ ಎಂ., ರಾಜ್ಯ ಸಮಿತಿ ಉಪಾಧ್ಯಕ್ಷ ಸುರೇಶ್ ಸಾಲ್ಯಾನ್, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಜಯಪ್ರಕಾಶ್ ಪೆರ್ವ, ಸದಸ್ಯರಾದ ಸೀತಾರಾಮ ಪೂಜಾರಿ ಅಗೋಳಿಬೆಟ್ಟು, ದಿನಕರ್, ರವಿ, ಉಪಸ್ಥಿತರಿದ್ದರು. ಶಿಕ್ಷಕ ಬಾಲಕೃಷ್ಣ ಶೆಟ್ಟಿ ಸ್ವಾಗತಿಸಿದರು.
ಮುಖ್ಯ ಶಿಕ್ಷಕಿ ಜಯಲಕ್ಷ್ಮೀ ಪಿ.ಎನ್. ಪ್ರಾಸ್ತಿವಿಕವಾಗಿ ಮಾತನಾಡಿದರು, ಗಣೇಶ್ ಬಿ. ವಂದಿಸಿದರು. ಸುಲೋಚನಾ ಕಾರ್ಯಕ್ರಮ ನಿರೂಪಿಸಿದರು.
ಬಳಿಕ ಶಾಲಾ ಪರಿಸರದಲ್ಲಿ ಬೆಳೆದಿದ್ದ ಹುಲ್ಲು, ಕಳೆಗಿಡಗಳನ್ನು ಸ್ವಚ್ಛಗೊಳಿಸಲಾಯಿತು.