ಮಂಗಳೂರು, ಅ.03 (DaijiworldNews/PY): ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಮಂಗಳೂರು ಸ್ಮಾಟ್ ಸಿಟಿ ವತಿಯಿಂದ ಆಜಾದಿ ಕಾ ಅಮೃತ್ ಮಹೋತ್ಸವ ಆಚರಣೆಯ ಮಾಡಲಾಗುತ್ತಿದ್ದು, ಈ ಪ್ರಯುಕ್ತ ವಿಂಟೇಜ್ ಕಾರು, ಸೈಕಲ್ ರ್ಯಾಲಿಗೆ ಭಾನುವಾರ ಚಾಲನೆ ನೀಡಲಾಯಿತು.
ರ್ಯಾಲಿಗೆ ಮೇಯರ್ ಪ್ರೇಮಾನಂದ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದಿದ್ದು, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ ವಿ ಚಾಲನೆ ನೀಡಿದರು.
ನಗರದ ಎ.ಬಿ. ಶೆಟ್ಟಿ ವೃತ್ತದ ಬಳಿಯಿಂದ ವಿಂಟೇಜ್ ಕಾರ್ ರ್ಯಾಲಿ, ಸೈಕಲ್ ರ್ಯಾಲಿ, ವಾಕಾಥಾನ್ ನಗರದ ಹಲವು ಕಡೆ ಸಾಗಿತು.