ಕಾಸರಗೋಡು, ಅ.04 (DaijiworldNews/HR): ಯುವಕನೋರ್ವ ಆರು ಮಂದಿಗೆ ಇರಿದ ಘಟನೆ ಕುಂಬಳೆ ಸಮೀಪದ ಬಂಬ್ರಾಣದಲ್ಲಿ ನಡೆದಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ.
ಸಾಂದರ್ಭಿಕ ಚಿತ್ರ
ಗಾಯಗೊಂಡವರನ್ನು ಬಂಬ್ರಾಣದ ಕಿರಣ್ (29), ಕುದ್ರೆಪ್ಪಾಡಿಯ ಗುರುರಾಜ್ (23), ನವೀನ್ (22) , ಧೀರಜ್ (21 , ಪ್ರವೀಣ್ (21) ಮತ್ತು ಚರಣ್ (23) ಎಮ್ದು ಗುರುತಿಸಲಾಗಿದೆ.
ಗಾಯಾಳುಗಳನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೋಳಿ ಅಂಕದ ಸ್ಥಳದಲ್ಲಿ ಉಂಟಾದ ಮಾತಿನ ಚಕಮಕಿ ಘಟನೆಗೆ ಕಾರಣ ಎನ್ನಲಾಗಿದ್ದು, ಕುಂಬಳೆ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ನಡೆಸುತ್ತಿದ್ದಾರೆ.