ಕಾಸರಗೋಡು, ಅ.04 (DaijiworldNews/HR): ಬೇಕಲ ಸಮೀಪದ ಸಮುದ್ರದಲ್ಲಿ ಮುಳುಗಿ ಪಶ್ಚಿಮ ಬಂಗಾಳದ ಕಾರ್ಮಿಕನೋರ್ವ ಮೃತಪಟ್ಟ ಘಟನೆ ನಡೆದಿದೆ.
ಪಶ್ಚಿಮ ಬಂಗಾಳ ಮುರ್ಶಿದಬಾದ್ನ ಸಫಿಜುಲ್ ಇಸ್ಲಾಂ (19) ಮೃತಪಟ್ಟವರು.
ಭಾನುವಾರ ಸಂಜೆ ಸಮುದ್ರಕ್ಕಿಳಿದ ಸಂದರ್ಭದಲ್ಲಿ ಅಲೆಗಳ ಅಬ್ಬರಕ್ಕೆ ಸಿಲುಕಿ ನಾಪತ್ತೆಯಾಗಿದ್ದರು. ಇದನ್ನು ಗಮನಿಸಿದ ಉಳಿದವರು ರಕ್ಷಿಸಲು ಯತ್ನಿಸಿದರೂ ಸಾಧ್ಯವಾಗಲಿಲ್ಲ. ಕೊನೆಗೆ ಪೊಲೀಸರಿಗೆ ಮಾಹಿತಿ ನೀಡಲಾಯಿತು.
ಕರಾವಳಿ ಪೊಲೀಸರು, ಲೈಫ್ ಗಾರ್ಡ್ ರಾತ್ರಿ ತನಕ ಶೋಧ ನಡೆಸಿದ್ದರೂ ಪತ್ತೆಯಾಗಿರಲಿಲ್ಲ. ಸೋಮವಾರ ಬೆಳಿಗ್ಗೆಯಿಂದ ಮತ್ತೆ ಶೋಧ ನಡೆಸಿದಾಗ ಕೋಟಿಕುಳಂ ಸಮೀಪ ಬಂಡೆ ಕಲ್ಲಿಗೆ ಸಿಲುಕಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.
ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾ ಗಾರದಲ್ಲಿರಿಸಲಾಗಿದ್ದು, ಸಂಬಂಧಿಕರು ಬಂದ ಬಳಿಕ ಮರಣೋತ್ತರ ಪರೀಕ್ಷೆ ನಡೆಸಿ ಬಿಟ್ಟುಕೊಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಸಫಿಜುಲ್ ಇಸ್ಲಾಂ ಕಟ್ಟಡ ಕಾರ್ಮಿಕರಾಗಿ ದುಡಿಯುತ್ತಿದ್ದರು.