ಮಂಗಳೂರು, ಅ. 05 (DaijiworldNews/SM): ಖಾಸಗಿ ಬಸ್ ಚಾಲಕ, ನಿರ್ವಾಹಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಮಂಗಳೂರು ಹೊರವಲಯದ ಪಣಂಬೂರಿನಲ್ಲಿ ನಡೆದಿದೆ.
ಕಾರಿನಲ್ಲಿದ್ದ 10 ಮಂದಿಯ ತಂಡದಿಂದ ಕೃತ್ಯ ನಡೆದಿದೆ. ಸೈಡ್ ಕೊಡುವ ವಿಚಾರಕ್ಕೆ ಸಂಬಂಧಿಸಿ ಹಲ್ಲೆ ನಡೆಸಲಾಗಿದೆ. ಚಾಲಕ ಹರೀಶ್, ನಿರ್ವಾಹಕ ಅಲ್ತಾಫ್ ಹಲ್ಲೆಗೊಳಗಾದವರು. ಗಾಯಾಳುಗಳನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪಣಂಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.