ಮಂಗಳೂರು, ಅ. 06 (DaijiworldNews/SM): ಅದ್ದೂರಿಯಾಗಿ ನಡೆಯುವ ಮಂಗಳೂರು ದಸರಾ ಮಹೋತ್ಸವಕ್ಕೆ ಕ್ಷಣಗಣನೆ ಶುರುವಾಗಿದೆ. ಗುರುವಾರದಂದು ದಸರಾ ಮಹೋತ್ಸವಕ್ಕೆ ಚಾಲನೆ ಸಿಗಲಿದೆ.
ನವರಾತ್ರಿ ಮಹೋತ್ಸವ ಆರಂಭ ಹಿನ್ನೆಲೆಯಲ್ಲಿ ಶ್ರೀ ಗೋಕರ್ಣನಾಥ ಕ್ಷೇತ್ರವನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ. ಗುರುವಾರದಂದು ಮಹೋತ್ಸವಕ್ಕೆ ಗುರುಪೂಜೆಯೊಂದಿಗೆ ಚಾಲನೆ ದೊರೆಯಲಿದೆ.
ಸದ್ಯ ಕ್ಷೇತ್ರ ಸಂಪೂರ್ಣ ವಿದ್ಯುತ್ ದೀಪಗಳಿಂದ ಅಲಂಕರಿಸುವ ಮೂಲಕ ಕ್ಷೇತ್ರದತ್ತ ಭಕ್ತರನ್ನು ಕೈಬೀಸಿ ಕರೆಯುತ್ತಿದೆ. ಇನ್ನು ಆಡಳಿತ ಸಮಿತಿ ಹಾಗೂ ದಸರಾ ಆಯೋಜನಾ ಸಮಿತಿ ಎಲ್ಲಾ ರೀತಿಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಕೊರೋನಾ ಮುನ್ನೆಚ್ಚರಿಕೆಗಳನ್ನು ಪಾಲಿಸಿಕೊಂಡು ಮಹೋತ್ಸವ ನಡೆಸಲು ಸಮಿತಿ ಎಲ್ಲಾ ರೀತಿಯ ಸಿದ್ಧತೆಗಳನ್ನು ನಡೆಸಿಕೊಂಡಿವೆ.