ಮಂಗಳೂರು, ಅ 08 (DaijiworldNews/MS): ಕದ್ರಿ ಠಾಣಾ ವ್ಯಾಪ್ತಿಯ ಖಾಸಗಿ ಕಾಲೇಜೊಂದರ ಬಳಿ ಅಕ್ಟೋಬರ್ 6 ರ ಬುಧವಾರದಂದು ರಾತ್ರಿ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕ-ಯುವತಿಗೆ ಬಜರಂಗದಳದ ಕಾರ್ಯಕರ್ತರು ಬುದ್ದಿ ಹೇಳಿ ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ.
ಆದರೆ ಬಳಿಕ ನಡೆದ ಬೆಳವಣಿಗೆಯಲ್ಲಿ ಪೊಲೀಸ್ ಠಾಣೆಯಲ್ಲಿ ಜೋಡಿಗಳು ಭಜರಂಗದಳದ ಕಾರ್ಯಕರ್ತರ ವಿರುದ್ದ ತಿರುಗಿಬಿದ್ದಿದ್ದು, ಬಜರಂಗದಳದ ಕಾರ್ಯಕರ್ತರು ನಮ್ಮ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಪ್ರಕರಣ ದಾಖಲಿಸಿದ್ದಾರೆ.
ಜೋಡಿಗಳು ನೀಡಿದ ದೂರಿನ ಆಧಾರ ಮೇಲೆ ಇಬ್ಬರು ಬಜರಂಗದಳದ ಕಾರ್ಯಕರ್ತರನ್ನು ಪೊಲೀಸರು ಬುಧವಾರ ಬಂದಿಸಿದ್ದಾರೆ .
ಸಾರ್ವಜನಿಕ ಸ್ಥಳದಲ್ಲಿಯೇ ಅಸಭ್ಯವಾಗಿ ವರ್ತಿಸುತ್ತಿದ್ದ ಜೋಡಿಯನ್ನು ನಾವು ಪೋಲಿಸರಿಗೆ ಒಪ್ಪಿಸಿದರೂ, ನಮ್ಮ ಮೇಲೆಯೇ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಪೋಲಿಸರ ಮೇಲೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.